ಸಿದ್ದರಾಮಯ್ಯ 
ರಾಜ್ಯ

ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆ ಅಗತ್ಯವಿದೆ: ಸಿದ್ದರಾಮಯ್ಯ

ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆ ಅಗತ್ಯವಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.

ಶಿವಮೊಗ್ಗ: ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆ ಅಗತ್ಯವಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.

ಚುನಾವಣಾ ಆಯೋಗದ ಆಯುಕ್ತರ ನೇಮಕಾತಿಯಲ್ಲಿ ಪಾರದರ್ಶಕತೆ ಇಲ್ಲ, ಕೇಂದ್ರ ಸರ್ಕಾರದ ಹಸ್ತಕ್ಷೇಪದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿರುವ ಕುರಿತು ಸಿದ್ದರಾಮಯ್ಯ ಅವರು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಭಾರತೀಯ ಚುನಾವಣಾ ಆಯೋಗವು ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಇದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸಬೇಕು. ಹೀಗಾಗಿ ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆ ಅಗತ್ಯವಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ಪ್ರತಿನಿಧಿಗಳನ್ನು ಸದಸ್ಯರನ್ನಾಗಿ ಹೊಂದಿರುವ ಕೊಲಿಜಿಯಂ ಅನ್ನು ರಚಿಸಬೇಕೆಂದು ನಾನು ಸೂಚಿಸುತ್ತೇನೆ. ಇದರಿಂದ ದೇಶಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು.

ಇದೇ ವೇಳೆ ತಮ್ಮ ಜೀವನ ಚರಿತ್ರೆ ಆಧಾರಿತ ಚಿತ್ರವೊಂದು ನಿರ್ಮಾಣವಾಗುತ್ತಿದೆ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿ, ಯಾರೋ ಸಿನಿಮಾ ಮಾಡಲು ಬಂದಿದ್ರು. ಕನಕಗಿರಿ ಕ್ಷೇತ್ರದವರಂತೆ, ನಿಮ್ಮ ಸಿನಿಮಾ ಮಾಡ್ತೀನಿ ಅಂತ ಹೇಳಿದ್ರು, ನಾನೇನು ನಟನೆ ಮಾಡುತ್ತಿಲ್ಲಪ್ಪ, ನನಗೆ ಆಕ್ಟಿಂಗ್ ಬರಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT