ಮೈಸೂರಿನಲ್ಲಿ ಭಾರತ್ ಜೋಡೋ ಯಾತ್ರೆ 
ರಾಜ್ಯ

'ಭಾರತ್ ಜೋಡೋ ಯಾತ್ರೆ': ಧ್ವಜ ನೆಟ್ಟಿದ್ದ ಕಬ್ಬಿಣದ ಕಂಬಿ ಕಿತ್ತು - ಹಣ್ಣು, ನೀರಿನ ಬಾಟಲ್ ದೋಚಿ ಜನರು ಪರಾರಿ!

ಗುಂಡ್ಲುಪೇಟೆಯಲ್ಲಿ ನಡೆದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಅವ್ಯವಸ್ಥೆಗಳ ಆಗರವಾಗಿತ್ತು. ರಾಜ್ಯ ನಾಯಕರು ಎಷ್ಟೇ ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸಿದ್ದರೂ  ಕೆಲವರಿಂದ ಅಸ್ತವ್ಯಸ್ತವಾಗಿತ್ತು.

ಮೈಸೂರು: ಗುಂಡ್ಲುಪೇಟೆಯಲ್ಲಿ ನಡೆದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಅವ್ಯವಸ್ಥೆಗಳ ಆಗರವಾಗಿತ್ತು. ರಾಜ್ಯ ನಾಯಕರು ಎಷ್ಟೇ ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸಿದ್ದರೂ ಕೆಲವರಿಂದ ಅಸ್ತವ್ಯಸ್ತವಾಗಿತ್ತು.

ಗುಂಡ್ಲುಪೇಟೆ-ಮೈಸೂರು ಹೆದ್ದಾರಿಯಲ್ಲಿ ಭಾರತ್ ಜೋಡೋ ಪಾದಯಾತ್ರೆಗಾಗಿ, ಹಾಕಿದ್ದ ಕಬ್ಬಿಣದ ಧ್ವಜಸ್ತಂಭಗಳನ್ನು ಕೆಲ ಜನರು ಕಿತ್ತುಕೊಂಡು ಓಡಿ ಹೋದ ಕಾರಣ ಭಾರತ್ ಜೋಡೋ ಯಾತ್ರೆಗೆ ಸ್ವಲ್ಪ ಹಿನ್ನಡೆ ಉಂಟಾಯಿತು.

ದಿನವಿಡೀ ಶ್ರಮ ವಹಿಸಿ ಪಕ್ಷದ ಕಾರ್ಯಕರ್ತರು ನೆಟ್ಟ ಧ್ವಜ ಹಾಕಿದ್ದ ಲೋಹದ ಕಂಬಗಳನ್ನು ಕಿತ್ತುಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂತು.

ನಾವು ಹಣವಿಲ್ಲದೇ ಪರದಾಡುತ್ತಿದ್ದೇವೆ, ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುವುದು ನಿಜಕ್ಕೂ ಕಷ್ಟಕರವಾಗಿದೆ, ಕಂಬಗಳನ್ನು ತೆಗೆದುಕೊಂಡು ಹೋಗುವುದು ಯಾವುದೇ ಅಪರಾಧವಲ್ಲ, ಅಥವಾ ತಪ್ಪಲ್ಲ ಎಂದು ಕೆಲಸೂರು ಬಳಿ ಇರುವ ನಂಜಯ್ಯ ಹೇಳಿದ್ದಾರೆ, ಅವರು 7 ಕಂಬಗಳನ್ನು ಕಿತ್ತುಕೊಂಡು ಹೋಗಿದ್ದಾರೆ, ಅವರಿಗೆ ಮತ್ತೆ ಹೆಚ್ಚಿನ ಪ್ರಶ್ನೆಗಳನ್ನು ಕೇಳಿದಾಗ ಅಲ್ಲಿಂದ ಓಡಿ ಹೋದರು.

ಭಾರತ್ ಜೋಡೋ ಕಾರ್ಯಕ್ರಮಕ್ಕೆ ಆಗಮಿಸಿದವರಿಗಾಗಿ, ಮಧ್ಯಾಹ್ನದ ಊಟ, ಮಜ್ಜಿಗೆ, ಕಬ್ಬಿನ ರಸ, ಸೇರಿದಂತೆ ಟೀ, ಕಾಫಿ ವ್ಯವಸ್ಥೆ ಮಾಡಿದ್ದರು. ಸುಡುವ ಬಿಸಿಲಿನಲ್ಲಿ ಸಾವಿರಾರು ಜನರಿಗೆ ಆಹಾರ ವಿತರಿಸಲು ಸಂಘಟಕರು ಸುಸ್ತಾಗಿದ್ದರಿಂದ ಹಲವರು, ನೀರಿನ ಬಾಟಲ್ ಗಳು ಮತ್ತು ಒಬ್ಬೊಬ್ಬರು 10-12 ಬಾಳೆಹಣ್ಣುಗಳನ್ನು  ತೆಗೆದುಕೊಂಡು ಹೋದರು..

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CJP Protest: ಹೊಸ ಮಾತುಕತೆಯ ಪ್ರಸ್ತಾಪ ಮುಂದಿಟ್ಟ ಕೇಂದ್ರ ಸರ್ಕಾರ, ಪ್ರತಿಭಟನಾಕಾರರು ಎಲ್ಲಿ ಹೇಳ್ತಾರೋ ಅಲ್ಲಿಯೇ ಚರ್ಚೆಗೆ ಸಿದ್ಧ- ಜೀತೇಂದ್ರ ಸಿಂಗ್!

CJP ಪ್ರತಿಭಟನೆಗೆ ಅಣ್ಣಾ ಹಜಾರೆ ಎಂಟ್ರಿ: ಕಣ್ಣೀರು ಮೂಲಕ ಮೌನ ಚಳುವಳಿ ಆರಂಭಿಸಿದ ಹಜಾರೆ, Video!

ಮೋದಿ ಪ್ರತಿಕ್ರಿಯೆಗೆ ಕಾಕ್ರೋಚ್ ಕೆಂಡಾಮಂಡಲ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ - CJP

ಜು. 26 ರಂದು ಮುಂಬೈಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ: ಅಡ್ಡಿಗೆ ಯತ್ನಿಸಿದರೆ ಒದೆ ಬೀಳುತ್ತೆ- ವಾರ್ನಿಂಗ್ ಕೊಟ್ಟ ರಾಜ್ ಠಾಕ್ರೆ!

India vs Australia: ಆಸ್ಟ್ರೇಲಿಯಾ ತಂಡದಲ್ಲಿ ಭಾರತ ಮೂಲದ ಇಬ್ಬರಿಗೆ ಸ್ಥಾನ; ಟೀಂ ಇಂಡಿಯಾ ವಿರುದ್ಧವೇ ಕಣಕ್ಕೆ!