ಮೈಸೂರಿನಲ್ಲಿ ಭಾರತ್ ಜೋಡೋ ಯಾತ್ರೆ 
ರಾಜ್ಯ

'ಭಾರತ್ ಜೋಡೋ ಯಾತ್ರೆ': ಧ್ವಜ ನೆಟ್ಟಿದ್ದ ಕಬ್ಬಿಣದ ಕಂಬಿ ಕಿತ್ತು - ಹಣ್ಣು, ನೀರಿನ ಬಾಟಲ್ ದೋಚಿ ಜನರು ಪರಾರಿ!

ಗುಂಡ್ಲುಪೇಟೆಯಲ್ಲಿ ನಡೆದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಅವ್ಯವಸ್ಥೆಗಳ ಆಗರವಾಗಿತ್ತು. ರಾಜ್ಯ ನಾಯಕರು ಎಷ್ಟೇ ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸಿದ್ದರೂ  ಕೆಲವರಿಂದ ಅಸ್ತವ್ಯಸ್ತವಾಗಿತ್ತು.

ಮೈಸೂರು: ಗುಂಡ್ಲುಪೇಟೆಯಲ್ಲಿ ನಡೆದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಅವ್ಯವಸ್ಥೆಗಳ ಆಗರವಾಗಿತ್ತು. ರಾಜ್ಯ ನಾಯಕರು ಎಷ್ಟೇ ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸಿದ್ದರೂ ಕೆಲವರಿಂದ ಅಸ್ತವ್ಯಸ್ತವಾಗಿತ್ತು.

ಗುಂಡ್ಲುಪೇಟೆ-ಮೈಸೂರು ಹೆದ್ದಾರಿಯಲ್ಲಿ ಭಾರತ್ ಜೋಡೋ ಪಾದಯಾತ್ರೆಗಾಗಿ, ಹಾಕಿದ್ದ ಕಬ್ಬಿಣದ ಧ್ವಜಸ್ತಂಭಗಳನ್ನು ಕೆಲ ಜನರು ಕಿತ್ತುಕೊಂಡು ಓಡಿ ಹೋದ ಕಾರಣ ಭಾರತ್ ಜೋಡೋ ಯಾತ್ರೆಗೆ ಸ್ವಲ್ಪ ಹಿನ್ನಡೆ ಉಂಟಾಯಿತು.

ದಿನವಿಡೀ ಶ್ರಮ ವಹಿಸಿ ಪಕ್ಷದ ಕಾರ್ಯಕರ್ತರು ನೆಟ್ಟ ಧ್ವಜ ಹಾಕಿದ್ದ ಲೋಹದ ಕಂಬಗಳನ್ನು ಕಿತ್ತುಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂತು.

ನಾವು ಹಣವಿಲ್ಲದೇ ಪರದಾಡುತ್ತಿದ್ದೇವೆ, ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುವುದು ನಿಜಕ್ಕೂ ಕಷ್ಟಕರವಾಗಿದೆ, ಕಂಬಗಳನ್ನು ತೆಗೆದುಕೊಂಡು ಹೋಗುವುದು ಯಾವುದೇ ಅಪರಾಧವಲ್ಲ, ಅಥವಾ ತಪ್ಪಲ್ಲ ಎಂದು ಕೆಲಸೂರು ಬಳಿ ಇರುವ ನಂಜಯ್ಯ ಹೇಳಿದ್ದಾರೆ, ಅವರು 7 ಕಂಬಗಳನ್ನು ಕಿತ್ತುಕೊಂಡು ಹೋಗಿದ್ದಾರೆ, ಅವರಿಗೆ ಮತ್ತೆ ಹೆಚ್ಚಿನ ಪ್ರಶ್ನೆಗಳನ್ನು ಕೇಳಿದಾಗ ಅಲ್ಲಿಂದ ಓಡಿ ಹೋದರು.

ಭಾರತ್ ಜೋಡೋ ಕಾರ್ಯಕ್ರಮಕ್ಕೆ ಆಗಮಿಸಿದವರಿಗಾಗಿ, ಮಧ್ಯಾಹ್ನದ ಊಟ, ಮಜ್ಜಿಗೆ, ಕಬ್ಬಿನ ರಸ, ಸೇರಿದಂತೆ ಟೀ, ಕಾಫಿ ವ್ಯವಸ್ಥೆ ಮಾಡಿದ್ದರು. ಸುಡುವ ಬಿಸಿಲಿನಲ್ಲಿ ಸಾವಿರಾರು ಜನರಿಗೆ ಆಹಾರ ವಿತರಿಸಲು ಸಂಘಟಕರು ಸುಸ್ತಾಗಿದ್ದರಿಂದ ಹಲವರು, ನೀರಿನ ಬಾಟಲ್ ಗಳು ಮತ್ತು ಒಬ್ಬೊಬ್ಬರು 10-12 ಬಾಳೆಹಣ್ಣುಗಳನ್ನು  ತೆಗೆದುಕೊಂಡು ಹೋದರು..

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT