ಕೆಎಸ್ ಆರ್ ಟಿಸಿ ಬಸ್ ಗಳು 
ರಾಜ್ಯ

65 ವರ್ಷಗಳಲ್ಲೇ ಮೊದಲು: 1ನೇ ತಾರೀಖು ವೇತನ ಪಾವತಿ, ಕೆಎಸ್‌ಆರ್‌ಟಿಸಿ ದಾಖಲೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್‌ಟಿಸಿ) ಚಾಲಕರು ಹಾಗೂ ನಿರ್ವಾಹಕರಿಗೆ 65 ವರ್ಷಗಳ ಬಳಿಕ ಮೊದಲ ಬಾರಿಗೆ ತಿಂಗಳ ಆರಂಭದ ದಿನದಂದೇ ವೇತನ ಪಾವತಿಸಲಾಗಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್‌ಟಿಸಿ) ಚಾಲಕರು ಹಾಗೂ ನಿರ್ವಾಹಕರಿಗೆ 65 ವರ್ಷಗಳ ಬಳಿಕ ಮೊದಲ ಬಾರಿಗೆ ತಿಂಗಳ ಆರಂಭದ ದಿನದಂದೇ ವೇತನ ಪಾವತಿಸಲಾಗಿದೆ.

ಹೌದು.. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ/ KSRTC) ತನ್ನ 36 ಸಾವಿರ ಸಿಬ್ಬಂದಿ ವರ್ಗಕ್ಕೆ ದಸರಾ (Dasara) ಹಬ್ಬದ ಸಿಹಿ ಸುದ್ದಿ ನೀಡಿದೆ. ಸಾರಿಗೆ ಸಂಸ್ಥೆಯ 65 ವರ್ಷಗಳ ಇತಿಹಾಸದಲ್ಲಿ ತಿಂಗಳ ಮೊದಲ ದಿನ ಎಲ್ಲ ಅಧಿಕಾರಿ, ಸಿಬ್ಬಂದಿಗಳಿಗೆ ವೇತನ ಪಾವತಿ ಮಾಡಿರುವುದು ಇದೇ ಮೊದಲು. ಮೈಸೂರು ಸರಕಾರದ ರಸ್ತೆ ಸಾರಿಗೆ ಇಲಾಖೆಯು 1957ರಲ್ಲಿ ಶುರುವಾಯಿತು. ಅಂದಿನಿಂದ ಇಲ್ಲಿಯವರೆಗೆ ಎಲ್ಲ ಸಿಬ್ಬಂದಿಗೆ ಒಂದೇ ದಿನ ಸಂಬಳ ನೀಡುತ್ತಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದಿದ್ದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌ ಅವರು ಪ್ರತಿ ತಿಂಗಳ 1ರಂದು ಎಲ್ಲರಿಗೂ ವೇತನ ಪಾವತಿಸಲು ಆದೇಶಿಸಿದ್ದರು. ಅದರಂತೆ ವೇತನ ನೀಡಲಾಗಿದೆ.

ನಿಗಮದ 36 ಸಾವಿರ ಚಾಲಕರು ಹಾಗೂ ನಿರ್ವಾಹಕರ ಬ್ಯಾಂಕ್‌ ಖಾತೆಗೆ ಅಕ್ಟೋಬರ್‌ 1ರಂದು ವೇತನ ನೀಡಲಾಗಿದೆ. 1957ರಿಂದ (ಅಂದಿನ ಮೈಸೂರು ಸರ್ಕಾರ ರಸ್ತೆ ಸಾರಿಗೆ ಇಲಾಖೆ) ಇದುವರೆಗೆ ಚಾಲಕರು ಹಾಗೂ ನಿರ್ವಾಹಕರಿಗೆ ಪ್ರತಿ ತಿಂಗಳ 7ರಂದು ವೇತನ ಪಾವತಿ ಆಗುತ್ತಿತ್ತು. ತಾಂತ್ರಿಕ ಸಿಬ್ಬಂದಿಗೆ ಆಯಾ ತಿಂಗಳ 4ರಂದು ಹಾಗೂ ಅಧಿಕಾರಿಗಳು, ಆಡಳಿತ ಸಿಬ್ಬಂದಿಗೆ 1ರಂದು ವೇತನ ನೀಡಲಾಗುತ್ತಿತ್ತು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಸೂಚನೆಯಂತೆ ಚಾಲಕರಿಗೆ ವೇತನ ಪಾವತಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಹಿಂದೆ ಚಾಲಕ, ನಿರ್ವಾಹಕರಿಗೆ ಪ್ರತಿ ತಿಂಗಳು 7ರಂದು, ತಾಂತ್ರಿಕ ಸಿಬ್ಬಂದಿಗೆ 4 ಹಾಗೂ ಅಧಿಕಾರಿ, ಆಡಳಿತ ಸಿಬ್ಬಂದಿಗೆ ತಿಂಗಳ ಒಂದನೇ ತಾರೀಖಿನಂದು ವೇತನ ಪಾವತಿ ಮಾಡಲಾಗುತ್ತಿತ್ತು. ಇದೀಗ ಎಲ್ಲರಿಗೂ ತಿಂಗಳ ಮೊದಲ ದಿನವೇ ವೇತನ ಪಾವತಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. 36,000 ಸಿಬ್ಬಂದಿಯ ಮಾಸಿಕ ವೇತನಕ್ಕೆ ಸುಮಾರು 140 ಕೋಟಿ ರೂ. ವೆಚ್ಚವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT