ಕೆಎಸ್ ಆರ್ ಟಿಸಿ ಬಸ್ ಗಳು 
ರಾಜ್ಯ

65 ವರ್ಷಗಳಲ್ಲೇ ಮೊದಲು: 1ನೇ ತಾರೀಖು ವೇತನ ಪಾವತಿ, ಕೆಎಸ್‌ಆರ್‌ಟಿಸಿ ದಾಖಲೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್‌ಟಿಸಿ) ಚಾಲಕರು ಹಾಗೂ ನಿರ್ವಾಹಕರಿಗೆ 65 ವರ್ಷಗಳ ಬಳಿಕ ಮೊದಲ ಬಾರಿಗೆ ತಿಂಗಳ ಆರಂಭದ ದಿನದಂದೇ ವೇತನ ಪಾವತಿಸಲಾಗಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್‌ಟಿಸಿ) ಚಾಲಕರು ಹಾಗೂ ನಿರ್ವಾಹಕರಿಗೆ 65 ವರ್ಷಗಳ ಬಳಿಕ ಮೊದಲ ಬಾರಿಗೆ ತಿಂಗಳ ಆರಂಭದ ದಿನದಂದೇ ವೇತನ ಪಾವತಿಸಲಾಗಿದೆ.

ಹೌದು.. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ/ KSRTC) ತನ್ನ 36 ಸಾವಿರ ಸಿಬ್ಬಂದಿ ವರ್ಗಕ್ಕೆ ದಸರಾ (Dasara) ಹಬ್ಬದ ಸಿಹಿ ಸುದ್ದಿ ನೀಡಿದೆ. ಸಾರಿಗೆ ಸಂಸ್ಥೆಯ 65 ವರ್ಷಗಳ ಇತಿಹಾಸದಲ್ಲಿ ತಿಂಗಳ ಮೊದಲ ದಿನ ಎಲ್ಲ ಅಧಿಕಾರಿ, ಸಿಬ್ಬಂದಿಗಳಿಗೆ ವೇತನ ಪಾವತಿ ಮಾಡಿರುವುದು ಇದೇ ಮೊದಲು. ಮೈಸೂರು ಸರಕಾರದ ರಸ್ತೆ ಸಾರಿಗೆ ಇಲಾಖೆಯು 1957ರಲ್ಲಿ ಶುರುವಾಯಿತು. ಅಂದಿನಿಂದ ಇಲ್ಲಿಯವರೆಗೆ ಎಲ್ಲ ಸಿಬ್ಬಂದಿಗೆ ಒಂದೇ ದಿನ ಸಂಬಳ ನೀಡುತ್ತಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದಿದ್ದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌ ಅವರು ಪ್ರತಿ ತಿಂಗಳ 1ರಂದು ಎಲ್ಲರಿಗೂ ವೇತನ ಪಾವತಿಸಲು ಆದೇಶಿಸಿದ್ದರು. ಅದರಂತೆ ವೇತನ ನೀಡಲಾಗಿದೆ.

ನಿಗಮದ 36 ಸಾವಿರ ಚಾಲಕರು ಹಾಗೂ ನಿರ್ವಾಹಕರ ಬ್ಯಾಂಕ್‌ ಖಾತೆಗೆ ಅಕ್ಟೋಬರ್‌ 1ರಂದು ವೇತನ ನೀಡಲಾಗಿದೆ. 1957ರಿಂದ (ಅಂದಿನ ಮೈಸೂರು ಸರ್ಕಾರ ರಸ್ತೆ ಸಾರಿಗೆ ಇಲಾಖೆ) ಇದುವರೆಗೆ ಚಾಲಕರು ಹಾಗೂ ನಿರ್ವಾಹಕರಿಗೆ ಪ್ರತಿ ತಿಂಗಳ 7ರಂದು ವೇತನ ಪಾವತಿ ಆಗುತ್ತಿತ್ತು. ತಾಂತ್ರಿಕ ಸಿಬ್ಬಂದಿಗೆ ಆಯಾ ತಿಂಗಳ 4ರಂದು ಹಾಗೂ ಅಧಿಕಾರಿಗಳು, ಆಡಳಿತ ಸಿಬ್ಬಂದಿಗೆ 1ರಂದು ವೇತನ ನೀಡಲಾಗುತ್ತಿತ್ತು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಸೂಚನೆಯಂತೆ ಚಾಲಕರಿಗೆ ವೇತನ ಪಾವತಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಹಿಂದೆ ಚಾಲಕ, ನಿರ್ವಾಹಕರಿಗೆ ಪ್ರತಿ ತಿಂಗಳು 7ರಂದು, ತಾಂತ್ರಿಕ ಸಿಬ್ಬಂದಿಗೆ 4 ಹಾಗೂ ಅಧಿಕಾರಿ, ಆಡಳಿತ ಸಿಬ್ಬಂದಿಗೆ ತಿಂಗಳ ಒಂದನೇ ತಾರೀಖಿನಂದು ವೇತನ ಪಾವತಿ ಮಾಡಲಾಗುತ್ತಿತ್ತು. ಇದೀಗ ಎಲ್ಲರಿಗೂ ತಿಂಗಳ ಮೊದಲ ದಿನವೇ ವೇತನ ಪಾವತಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. 36,000 ಸಿಬ್ಬಂದಿಯ ಮಾಸಿಕ ವೇತನಕ್ಕೆ ಸುಮಾರು 140 ಕೋಟಿ ರೂ. ವೆಚ್ಚವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT