ಹೈಕೋರ್ಟ್ 
ರಾಜ್ಯ

ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ನಾಡಗೀತೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ನಾಡಗೀತೆ "ಜಯಭಾರತ ಜನನಿಯ ತನುಜಾತೆ" ಹಾಡಲು ಹೊರಡಿಸಿದ ಆದೇಶದ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 

ಬೆಂಗಳೂರು: ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ನಾಡಗೀತೆ "ಜಯಭಾರತ ಜನನಿಯ ತನುಜಾತೆ" ಹಾಡಲು ಹೊರಡಿಸಿದ ಆದೇಶದ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 

ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ ನಾಡಗೀತೆ ಹಾಡುವ ಸಂಬಂಧ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠವು  ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ನೋಟಿಸ್ ಜಾರಿಗೆ ಆದೇಶಿಸಿತು. 

2004 ರಲ್ಲಿ ಆದೇಶವೊಂದರ ಸಂಪೂರ್ಣ ಪದ್ಯವನ್ನು ನಾಡಗೀತೆಯಾಗಿ ಹಾಡಲು ಘೋಷಿಸಿದ ನಂತರ ಇಡೀ ರಾಜ್ಯವು ಸಿ ಅಶ್ವಥ್ ರಾಗ ಸಂಯೋಜಿಸಿ ಹಾಡಿರುವ ನಾಡಗೀತೆಯನ್ನು ಕೇಳಿದೆ. ಆದಾಗ್ಯೂ, ವಸಂತ ಕನಕಪುರ ಮತ್ತು ಡಾ.ಚನ್ನವೀರ ಕಣವಿ ನೇತೃತ್ವದ ಎರಡೂ ಸಮಿತಿಗಳು ಅಶ್ವಥ್ ಸಂಯೋಜಿಸಿರುವ ರಾಗವನ್ನು ಮುಂದುವರಿಸಲು ಶಿಫಾರಸು ಮಾಡಿದೆ. ಗಾಯಕ ವಿದ್ವಾನ್ ಎಚ್ ಆರ್ ಲೀಲಾವತಿ ನೇತೃತ್ವದ ಸಮಿತಿಯು 2021 ರಲ್ಲಿ ಮೈಸೂರು ಅನಂತಸ್ವಾಮಿ ಸಂಯೋಜಿಸಿರುವ ಧಾಟಿಯಲ್ಲಿ ಹಾಡಲು ಶಿಫಾರಸು ಮಾಡಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. 

ಅನಂತಸ್ವಾಮಿ ಸಂಪೂರ್ಣ ರಾಗ ಸಂಯೋಜನೆ ಮಾಡಿಲ್ಲದ ಬಗ್ಗೆ ಗಮನಕ್ಕೆ ತರಲು ಮುಖ್ಯ ಕಾರ್ಯದರ್ಶಿ ಮತ್ತು ಇತರರಿಗೆ ಮನವಿ ಸಲ್ಲಿಸಲಾಯಿತು, ಅದನ್ನು ಪರಿಗಣಿಸದೆ 2022 ಸೆಪ್ಟೆಂಬರ್ 25 ರಂದು ತಡೆ ಹಿಡಿದಿದ್ದ ಆದೇಶವನ್ನು ಹೊರಡಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಅನಂತಸ್ವಾಮಿ ಅವರ ಸಂಯೋಜನೆಯಲ್ಲಿ ಪೂರ್ಣ ಪ್ರಮಾಣದ ನಾಡಗೀತೆ ಇಲ್ಲದಿರುವುದರಿಂದ ಸರ್ಕಾರವು ಮೂರನೇ ವ್ಯಕ್ತಿಯಿಂದ ಇನ್ನೊಂದು ರಾಗವನ್ನು ರಚಿಸಬೇಕಾಗಿರುವುದರಿಂದ ಆಕ್ಷೇಪಾರ್ಹ ಆದೇಶವನ್ನು ಕಾರ್ಯಗತಗೊಳಿಸಲು ಅಸಾಧ್ಯವಾಗಿದೆ ಎಂದು ಹೇಳಲಾಗಿದೆ. ಹೀಗಿರುವಾಗ ಇದು ಅನಂತಸ್ವಾಮಿ ಹಾಗೂ ನಾಡಗೀತೆಗೆ ಅಗೌರವ ತೋರಿದಂತಾಗುತ್ತದೆ ಎಂದು ಅರ್ಜಿದಾರರು ದೂರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಏರಿದ ಇಂಧನ ದರ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ ರೂ. 7.5 ಏರಿಕೆ, ತೈಲ ಕಂಪನಿಗಳಿಂದ ವಾಹನ ಸವಾರರಿಗೆ ಮತ್ತೆ ಶಾಕ್..!

ನಿತಿನ್ ನಬೀನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!

ಬೆಂಗಳೂರು ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ಗಳೇ ಕಾರಣ? ‘Heat island’ ಪರಿಣಾಮ ಕುರಿತು ತಜ್ಞರ ಗಂಭೀರ ಎಚ್ಚರಿಕೆ..!

SIR ಹೆಸರಿನಲ್ಲಿ ಮತದಾರರ ಹೆಸರು ಡಿಲೀಟ್ ಆರೋಪ; war room ಸ್ಥಾಪಿಸಿದ ಕಾಂಗ್ರೆಸ್, ಎಚ್ಚರ ವಹಿಸುವಂತೆ 'ಕೈ' ನಾಯಕರಿಗೆ ಸಿದ್ದು-ಡಿಕೆಶಿ ಸೂಚನೆ

ಕೇದಾರನಾಥಕ್ಕೆ ಹೋಗ್ತಿದ್ದೀರಾ? ಹಾಗಾದ್ರೆ ದೇವಸ್ಥಾನದ ಹಿಂಭಾಗದಲ್ಲಿರುವ ಈ ಅದ್ಭುತ ಜಾಗಗಳನ್ನ ಮಿಸ್ ಮಾಡ್ಬೇಡಿ..!

SCROLL FOR NEXT