ಕಿತ್ತೂರು ಚೆನ್ನಮ್ಮ ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಬೊಮ್ಮಾಯಿ ಚಾಲನೆ

ಇದೇ 23 ರಿಂದ ಮೂರು ದಿನ ನಡೆಯಲಿರುವ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ' ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.

ಬೆಂಗಳೂರು: ಇದೇ 23 ರಿಂದ ಮೂರು ದಿನ ನಡೆಯಲಿರುವ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ' ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.

ನಂತರ ಅವರು ಮಾತನಾಡಿ, ರಾಜ್ಯಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಿಸಲಾಗುತ್ತಿದ್ದು, ಕಿತ್ತೂರು  ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ನೀಡಲಾಗಿದೆ. ಇದೇ ವರ್ಷ ಸುವರ್ಣ ಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪಿಸಲಾಗುವುದು, ಇರುವ ಅರಮನೆಯನ್ನು ನೈಜವಾಗಿಟ್ಟು, ಅದರ ಪಕ್ಕದಲ್ಲೇ ಹೊಸ ಅರಮನೆ ನಿರ್ಮಿಸಲಾಗುವುದು ಎಂದರು.

ಮುಂದಿನ ತಿಂಗಳು ಸಂಗೊಳ್ಳಿ  ರಾಯಣ್ಣ ಸೈನಿಕ ಶಾಲೆ ಉದ್ಘಾಟಿಸಲಾಗುವುದು,  ಕಿತ್ತೂರು ರಾಣಿ ಚೆನ್ನಮ್ಮನ ಬೈಲಹೊಂಗಲವನ್ನು ಅಭಿವೃದ್ಧಿಪಡಿಸಲಾಗುವುದು, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ, ಬೆಳವಾಡಿ ಮಲ್ಲಮ್ಮ, ಓಬವ್ವ ಅವರನ್ನು ನೆನಪನಲ್ಲಿಡುವ ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಆಧ್ಯಾತ್ಮಿಕ, ಧಾರ್ಮಿಕ ಹಾಗೂ ದೇಶಕ್ಕೆ ಹೋರಾಟ ಮಾಡಿದವರ ಸ್ಮಾರಕವನ್ನು ಸರ್ಕಾರ ಹಂತ ಹಂತವಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್‌; ಈ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ, ಸಿದ್ಧತೆ ಆರಂಭ: CM ಸಿದ್ದರಾಮಯ್ಯ

ರಾಹುಲ್ ಗಾಂಧಿ ಪ್ರಭು ಶ್ರೀರಾಮನಿದ್ದಂತೆ: ಶೋಷಿತರಿಗೆ ನ್ಯಾಯ ಒದಗಿಸುತ್ತಿದ್ದಾರೆ - ನಾನಾ ಪಟೋಲೆ

ಕೋಗಿಲು ತೆರವು: ಕೇವಲ 90 ಜನರಿಗೆ ಮಾತ್ರ ಮನೆ ಹಂಚಿಕೆ - ಸಚಿವ ಭೈರತಿ ಸುರೇಶ್

ಬಾಂಗ್ಲಾದೇಶದಲ್ಲಿ ಜೈಶಂಕರ್ ಹ್ಯಾಂಡ್ ಶೇಕ್: ಪಾಕ್ ವರದಿಗಳು ದೊಡ್ಡ "ಜೋಕ್" ಎಂದ ಮಾಜಿ ರಾಯಭಾರಿ!

ಇದು ಗಂಭೀರ ಪಾಪ, ನಿನ್ನ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತೀಯಾ: ಮಹಾಕಾಳನ ದರ್ಶನ ಪಡೆದ ಮುಸ್ಲಿಂ ನಟಿ ವಿರುದ್ಧ ಮೌಲಾನ ಗರಂ!

SCROLL FOR NEXT