ಪ್ರಶಸ್ತಿ ಪ್ರದಾನ ಮಾಡಿದ ಸಿಎಂ 
ರಾಜ್ಯ

ಸಿ.ಆರ್.ಚಂದ್ರಶೇಖರ್ ಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ

ಕರ್ನಾಟಕ ಸರಕಾರದ ವತಿಯಿಂದ ಈಗಾಗಲೇ 23 ಜಿಲ್ಲೆಗಳಲ್ಲಿ ಗಾಂಧಿಭವನ ನಿರ್ಮಿಸಲಾಗಿದ್ದು, ಇನ್ನೂ ಏಳು ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣವಾಗಬೇಕಿದೆ. ಈ ಏಳು ಜಿಲ್ಲೆಗಳಲ್ಲಿ ಒಂದು ವರ್ಷದೊಳಗೆ ನಿರ್ಮಾಣ ಮಾಡಲಾಗುವುದು...

ಬೆಂಗಳೂರು: ಕರ್ನಾಟಕ ಸರಕಾರದ ವತಿಯಿಂದ ಈಗಾಗಲೇ 23 ಜಿಲ್ಲೆಗಳಲ್ಲಿ ಗಾಂಧಿಭವನ ನಿರ್ಮಿಸಲಾಗಿದ್ದು, ಇನ್ನೂ ಏಳು ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣವಾಗಬೇಕಿದೆ. ಈ ಏಳು ಜಿಲ್ಲೆಗಳಲ್ಲಿ ಒಂದು ವರ್ಷದೊಳಗೆ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಅವರು ಭಾನುವಾರ ತಿಳಿಸಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಗಾಂಧಿಸ್ಮಾರಕ ನಿಧಿ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ಇಂದು ನಡೆದ ಮಹಾತ್ಮಗಾಂಧಿ ಜಯಂತಿ ಕಾರ್ಯಕ್ರಮಕ್ಕೆ‌ ಸಿಎಂ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸುಪ್ರಸಿದ್ಧ ಮನೋರೋಗ ತಜ್ಞ ಡಾ.ಸಿ.ಆರ್.ಚಂದ್ರಶೇಖರ್ ಅವರಿಗೆ ರಾಜ್ಯ ಸರಕಾರದ ಪ್ರತಿಷ್ಠಿತ 2022ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು.

ಉಳಿದ ಏಳು ಜಿಲ್ಲೆಗಳಲ್ಲಿ ಗಾಂಧಿಭವನ ನಿರ್ಮಾಣಕ್ಕೆ ಬೇಕಾದ ನಿವೇಶನ ಮತ್ತು ಅನುದಾನ ಒದಗಿಸಲು ಕ್ರಮವಹಿಸಲಾಗುವುದು ಎಂದು ಸಿಎಂ ತಿಳಿಸಿದರು.

ಖಾದಿ‌, ಗ್ರಾಮೀಣ ಕೈಗಾರಿಕೆಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿ‌ಲ್ಲಿ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುವುದು; ಈ ಮೂಲಕ ಮಾರುಕಟ್ಟೆ ಒದಗಿಸಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ‌ ಬಸವರಾಜ ಬೊಮ್ಮಾಯಿ ಅವರು, ಸುಪ್ರಸಿದ್ಧ ಮನೋರೋಗ ತಜ್ಞ ಡಾ.ಸಿ.ಆರ್.ಚಂದ್ರಶೇಖರ್ ಅವರಿಗೆ ಪ್ರಶಸ್ತಿ ಸಂದಿರುವುದರ ಬಗ್ಗೆ ಸಂತಸ ವ್ಯಕ್ತಪಡಿಸಿ  ಅವರ ಸೇವೆಯನ್ನು ನಮ್ಮ ಸರಕಾರ ಬಳಸಿಕೊಳ್ಳಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಶ್ರೀಲಂಕಾ ವಿರುದ್ಧ 165 ರನ್ ಗಳಿಂದ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!