ಸಾಂದರ್ಭಿಕ ಚಿತ್ರ 
ರಾಜ್ಯ

ಗ್ರಾಮ ಪಂಚಾಯ್ತಿ ಚುನಾವಣೆ ಘೋಷಣೆ: ಅ.28ರಂದು ಮತದಾನ, ಅ.31ಕ್ಕೆ ಫಲಿತಾಂಶ

ರಾಜ್ಯದ 252 ಗ್ರಾಮ ಪಂಚಾಯ್ತಿಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದ್ದು, ಇದೇ ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 31ರಂದು ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು: ರಾಜ್ಯದ 252 ಗ್ರಾಮ ಪಂಚಾಯ್ತಿಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದ್ದು, ಇದೇ ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 31ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಾಜ್ಯ ಚುನಾವಣಾ ಆಯೋಗ, 'ಗ್ರಾಮ ಪಂಚಾಯ್ತಿ ಸಾರ್ವತ್ರಿಕ ಚುನಾವಣೆ ಹಾಗೂ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ ಸದಸ್ಯ ಸ್ಥಾಗಳಿಗೆ ಉಪಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 30ಕ್ಕೆ ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದೆ.

ಅಂತೆಯೇ ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, 2022ರ ಆಗಸ್ಟ್ ನಿಂದ 2022ರ ನವೆಂಬರ್ ವರೆಗೆ ಮುಕ್ತಾಯವಾಗಲಿರುವಂತೆ 203 ಗ್ರಾಮ ಪಂಚಾಯ್ತಿಗಳಿಗೆ ಹಾಗೂ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ 49 ಗ್ರಾಮ ಪಂಚಾಯ್ತಿಗಳಿಗೆ ಉಪ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.

ಅಲ್ಲದೆ ಜಿಲ್ಲಾಧಿಕಾರಿಗಳಿಂದ ದಿನಾಂಕ 13-10-2022ರಂದು ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ. ದಿನಾಂಕ 18-10-2022ರಿಂದ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ನಾಮಪತ್ರಗಳ ಪರಿಶೀಲನೆ ದಿನಾಂಕ 19-10-2022ರಂದು ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ 21-10-2022 ಆಗಿದೆ.

ದಿನಾಂಕ 28-10-2022ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮರು ಮತದಾನ ಅವಶ್ಯಕತೆ ಇದ್ದರೆ ದಿನಾಂಕ 30-10-2022ರಂದು ನಡೆಸಲಾಗುತ್ತದೆ. ಮತಏಣಿಕೆ ದಿನಾಂಕ 31-10-2022ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!