ಬಂಜೂ ಸವಾರಿಗೆ ಚಾಲನೆ 
ರಾಜ್ಯ

ಮೈಸೂರು ದಸರಾ: ಚಾಮುಂಡೇಶ್ವರಿ ದೇವಿಗೆ ಸಿಎಂ ಬೊಮ್ಮಾಯಿ ಪುಷ್ಪಾರ್ಚನೆ; ಜಂಬೂ ಸವಾರಿಗೆ ಚಾಲನೆ!

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

3ನೇ ಬಾರಿಗೆ ಅಭಿಮನ್ಯು ಆನೆ ದೇವಿ ಚಾಮುಂಡೇಶ್ವರಿ ವಿರಾಜಮಾನಳಾಗಿರುವ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗಿದೆ. ಅಭಿಮನ್ಯುವಿನೊಂದಿಗೆ ಅರ್ಜುನ ನಿಶಾನೆ ಆನೆ, ಚೈತ್ರ ಮತ್ತು ಕಾವೇರಿ ಕುಮ್ಕಿ ಆನೆಗಳಾಗಿ ಜಂಬೂ ಸವಾರಿಯಲ್ಲಿ ಸಾಗಲಿವೆ. ಒಟ್ಟು 9 ಆನೆಗಳು ರಾಜ ಬೀದಿಗಳಲ್ಲಿ ಸಾಗುತ್ತಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಬಂಜೂಸವಾರಿ ಸಾಗಲಿದೆ. 

ಜಂಬೂ ಸವಾರಿ ಮೆರವಣಿಗೆ ಪ್ರಾರಂಭವಾಗಿದ್ದು ಎರಡು ವರ್ಷ ಕೊರೋನಾದಿಂದ ಕಳೆಗುಂದಿದ್ದ ಮಹೋತ್ಸವ ಈ ಭಾರಿ ಬಹಳ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಭಾರೀ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರು ದಸರಾಕ್ಕೆ ಚಾಲನೆ ನೀಡಿದ್ದರು.

ಸ್ತಬ್ಧಚಿತ್ರ ಪ್ರದರ್ಶನ ಮೆರವಣಿಗೆ: ಗಮನ ಸೆಳೆಯಲಿದೆ ಅಪ್ಪು ಮೂರ್ತಿ
ಈ ಭಾರಿ ಜಂಬೂ ಸವಾರಿ ಮೆರವಣಿಗೆಯಲ್ಲಿ 31 ಜಿಲ್ಲೆಗಳ ಕಲೆ, ಸಾಹಿತ್ಯ, ಇತಿಹಾಸವನ್ನು ಸ್ತಬ್ಧಚಿತ್ರ ಪ್ರತಿಬಿಂಬಿಸುವ 47 ಸ್ತಬ್ಧಚಿತ್ರಗಳು ಭಾಗಿಯಾಗಿವೆ. ಈಗಾಗಲೇ ಸ್ತಬ್ಧಚಿತ್ರ  ಪ್ರದರ್ಶನ ಮೆರವಣಿಗೆ ಪ್ರಾರಂಭವಾಗಿದೆ. ಈ ಬಾರಿ ವಿಶೇಷವಾಗಿ ನಟ ದಿ. ಪುನೀತ್​ ರಾಜಕುಮಾರ್​ ಭಾವಚಿತ್ರ ಇರುವ ಸ್ತಬ್ಧಚಿತ್ರ ಸೇರಿದೆ. ಮೈಸೂರಿನಲ್ಲಿ ದಸರಾ ವೈಭವದ ಸಂಭ್ರಮ ಮನೆಮಾಡಿದೆ. ಜಂಬೂ ಸವಾರಿ ನೋಡಲು ಅರಮನೆಗೆ ಸಾಕಷ್ಟು ಜನರು ಆಗಮಿಸಿದ್ದು ಜಂಬೂ ಸವಾರಿಯನ್ನು ಕಣ್ಣು ತುಂಬಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT