ಜಂಬೂ ಸವಾರಿ ಸಾಂದರ್ಭಿಕ ಚಿತ್ರ 
ರಾಜ್ಯ

ನಾಡಿನಾದ್ಯಂತ ವಿಜಯ ದಶಮಿ ಸಂಭ್ರಮ, ಜಂಬೂ ಸವಾರಿಗೆ ಸಕಲ ಸಿದ್ಧತೆ

ನಾಡಿನಾದ್ಯಂತ ವಿಜಯ ದಶಮಿ ಸಂಭ್ರಮ ಮನೆ ಮಾಡಿದೆ. ದುಷ್ಟ ಶಕ್ತಿ ಮೇಲೆ ಶಿಷ್ಟ ಶಕ್ತಿಯು ವಿಜಯ ಸಾರುವ ಸಾಂಕೇತಿಕವಾಗಿ ಹಬ್ಬ ಆಚರಿಸಲಾಗುತ್ತಿದ್ದು, ಮೈಸೂರಿನಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆ ನಡೆದಿದೆ.

ಮೈಸೂರು: ನಾಡಿನಾದ್ಯಂತ ವಿಜಯ ದಶಮಿ ಸಂಭ್ರಮ ಮನೆ ಮಾಡಿದೆ. ದುಷ್ಟ ಶಕ್ತಿ ಮೇಲೆ ಶಿಷ್ಟ ಶಕ್ತಿಯು ವಿಜಯ ಸಾರುವ ಸಾಂಕೇತಿಕವಾಗಿ ಹಬ್ಬ ಆಚರಿಸಲಾಗುತ್ತಿದ್ದು, ಮೈಸೂರಿನಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆ ನಡೆದಿದೆ.

ಮಧ್ಯಾಹ್ನ 2.36ರಿಂದ 2.50ರೊಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಸಂಜೆ 05:07 ರಿಂದ 5.18ರ ವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆ ಸಿಎಂ ಚಾಲನೆ ನೀಡಲಿದ್ದಾರೆ. 

ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಷ್ಟಾರ್ಚನೆ ಮಾಡಲಿದ್ದಾರೆ. ರಾಜ ವಂಶಸ್ಥ ಯದುವೀರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌, ಸಾಥ್ ನೀಡಲಿದ್ದಾರೆ. ಸಂಜೆ ಹೊತ್ತಿಗೆ ಚಿನ್ನದ ಅಂಬಾರಿ ಅರಮನೆ ಅಂಗಳದಿಂದ ಬನ್ನಿಮಂಟಪದತ್ತ ಪಯಣಿಸಲಿದ್ದು, ವಿದ್ಯುತ್ ದೀಪಾಲಂಕಾರದಲ್ಲಿ ಚಿನ್ನದ ಅಂಬಾರಿ ಸಾಗಲಿದೆ.

ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂ ಸವಾರಿ ಮೆರವಣಿಗೆ ನಡೆಯಲಿದ್ದು, ಆಲ್ಬರ್ಟ್‌ ವಿಕ್ಟರ್‌ ರಸ್ತೆ, ನ್ಯೂ ಸಯ್ಯಾಜಿರಾವ್‌ ರಸ್ತೆಯ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ. ರಾಜ್ಯದ ಕಲೆ, ಸಾಹಿತ್ಯ, ಇತಿಹಾಸ ಬಿಂಬಿಸುವ  48 ಸ್ತಬ್ಧಚಿತ್ರಗಳು, 50 ಕಲಾತಂಡಗಳ ಜಾನಪದ ಕಲಾ ಪ್ರದರ್ಶನದೊಂದಿಗೆ ಜಂಬೂ ಸವಾರಿ ಸಾಗಲಿದೆ. ಈ ಬಾರಿ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಸ್ತಬ್ಧ ಚಿತ್ರವೂ ಮೆರವಣಿಗೆಯಲ್ಲಿ ಇರಲಿದೆ.

 ಈ ಮಧ್ಯೆ, ಸಾಲು ಸಾಲು ರಜೆಗಳಿಂದಾಗಿ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಮೈಸೂರಿನತ್ತ ಧಾವಿಸುತ್ತಿದ್ದಾರೆ. ಇದರಿಂದಾಗಿ ನಗರದ ಬಹುತೇಕ ಹೋಟೆಲ್‌ಗಳು ಭರ್ತಿಯಾಗಿವೆ. ಪ್ರವಾಸಿಗರ ಜೊತೆಗೆ ಸ್ಥಳೀಯರು ದೀಪಾಲಂಕಾರ ವೀಕ್ಷಣೆ ಸೇರಿದಂತೆ ವಿವಿಧೆಡೆ ಭೇಟಿ ನೀಡುತ್ತಿರುವುದರಿಂದ ಅರಮನೆ ಸುತ್ತಮುತ್ತಲಿನ ರಸ್ತೆ ಮತ್ತಿತರ ಕಡೆ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT