ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ಎಸ್ ಸಿ, ಎಸ್ ಟಿಗೆ ಮೀಸಲಾತಿ ಹೆಚ್ಚಳ: ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ಸಂಬಂಧ ಚರ್ಚಿಸಲು ನಾಳೆ ವಿಧಾನಸಭೆ ಮತ್ತು ವಿಧಾನಪರಿಷತ್ತಿನ  ಸರ್ವ ಪಕ್ಷಗಳ ನಾಯಕರ ಸಭೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದಾರೆ.

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ಸಂಬಂಧ ಚರ್ಚಿಸಲು ನಾಳೆ ವಿಧಾನಸಭೆ ಮತ್ತು ವಿಧಾನಪರಿಷತ್ತಿನ  ಸರ್ವ ಪಕ್ಷಗಳ ನಾಯಕರ ಸಭೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದಾರೆ.

ಮೀಸಲಾತಿ ಹೆಚ್ಚಳ ಸಂಬಂಧ ಸರ್ವ ಪಕ್ಷ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚಿಗೆ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಭರವಸೆ ನೀಡಿದ್ದರು. ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ಬೇಡಿಕೆಯಿದೆ.

ಜನಸಂಖ್ಯೆ ಆಧಾರದ ಮೇಲೆ ಪರಿಶಿಷ್ಟ ಜಾತಿಗೆ ಶೇ. 15 ರಿಂದ 17 ರಷ್ಟು, ಪರಿಶಿಷ್ಟ ಪಂಗಡಕ್ಕೆ ಶೇ. 3 ರಿಂದ ಶೇ. 7 ರಷ್ಟು ಮೀಸಲಾತಿ ಹೆಚ್ಚಿಸಬೇಕೆಂದು ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಎಸ್ ಟಿ ಸಮುದಾಯಕ್ಕೆ ಶೇ. 7.5 ರಷ್ಟು ಮೀಸಲಾತಿ ಹೆಚ್ಚಿಸಬೇಕೆಂಬುದು ವಾಲ್ಮೀಕಿ ಸಮುದಾಯದ ಬೇಡಿಕೆಯಾಗಿದೆ. ಸಾರಿಗೆ ಸಚಿವ ಬಿ. ಶ್ರೀರಾಮುಲು ಈ ಬೇಡಿಕೆಯನ್ನು ತೀವ್ರವಾಗಿ ಬೆಂಬಲಿಸುತ್ತಿದ್ದಾರೆ.

ಮೀಸಲಾತಿಯನ್ನು ಶೇ. 50ಕ್ಕಿಂತ ಹೆಚ್ಚಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದರೆ, ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಶಿಫಾರಸುಗಳು ಸುಪ್ರೀಂ ನೀಡಿರುವ ಆದೇಶಕ್ಕಿಂತ ಹೆಚ್ಚಿನದಾಗಿದೆ. ಆದಾಗ್ಯೂ. ಅಸಾಧಾರಣ ಸಂದರ್ಭಗಳಲ್ಲಿ ನಿಯಮವನ್ನು ಸಡಿಲಿಸಬಹುದು ಎಂದು ನ್ಯಾಯಮೂರ್ತಿ ನಾಗಮೋಹನ್ ದಾಸ್ ಹೇಳಿದ್ದಾರೆ. ಇವರ ವರದಿ ಕುರಿತು ಸರ್ವ ಪಕ್ಷ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ.

ವಿವಿಧ ಸಮುದಾಯಗಳ ಬೇಡಿಕೆಯ ವಿವರಗಳು, ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಸಂಪುಟದಲ್ಲಿ ಚರ್ಚಿಸಲಾಗುತ್ತದೆ ನಂತರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಈ ಮಧ್ಯೆ ಲಿಂಗಾಯತ ಪಂಚಮಶಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ವ ಪಕ್ಷಗಳ ಸಭೆ ಕರೆಯಬೇಕೆಂದು ಲಿಂಗಾಯಿತ ಸ್ವಾಮೀಜಿ ಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT