ಶಿವಣ್ಣ ಬೆಲ್ಲದ್ 
ರಾಜ್ಯ

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಚಿಕ್ಕಪ್ಪ ಶಿವಣ್ಣ ಬೆಲ್ಲದ್ ನಿಧನ

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ್ ಅವರು ಮೃತಪಟ್ಟಿದ್ದಾರೆ.

ಧಾರವಾಡ: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ್ ಅವರು ಮೃತಪಟ್ಟಿದ್ದಾರೆ.

ಬುಧವಾರ ತಡರಾತ್ರಿ ಧಾರವಾಡದ ಎಸ್ಪಿ ಕಚೇರಿ ಎದುರು ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಶಿವಣ್ಣ ಅವರನ್ನು ರಾತ್ರಿಯೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಶಿವಣ್ಣ ಅವರು ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ್ ಸಹೋದರರಾಗಿದ್ದರು. ವಿದ್ಯಾವರ್ಧಕ ಸಂಘದ ಹಿಂದಿನ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.  ನ್ನು ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಅಪಘಾತ ನಡೆದಿತ್ತು. ಸದ್ಯ ಉಪನಗರ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಂತ್ಯಕ್ರಿಯೆ ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!