ಸರಳ ವಾಸ್ತು ಚಂದ್ರಶೇಖರ ಗುರೂಜಿ 
ರಾಜ್ಯ

ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಚಾರ್ಜ್​ಶೀಟ್​ನಲ್ಲಿ ಕೊಲೆಯ ಕಾರಣ ಉಲ್ಲೇಖ!

ಸರಳವಾಸ್ತು ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಪಟ್ಟಂತೆ ಪೊಲೀಸ್‌ ಕಮಿಷನರೇಟ್‌ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದೆ. ಜೆಎಂಎಫ್‌ ನ್ಯಾಯಾಲಯಕ್ಕೆ ಸಲ್ಲಿಸಿರುವ ಬರೋಬ್ಬರಿ 800 ಪುಟಗಳ ಚಾಜ್‌ಶೀಟ್‌ನಲ್ಲಿ ಕೊಲೆಗೆ ಏನು ಕಾರಣ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖವಾಗಿದೆ.

ಹುಬ್ಬಳ್ಳಿ: ಸರಳವಾಸ್ತು ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಪಟ್ಟಂತೆ ಪೊಲೀಸ್‌ ಕಮಿಷನರೇಟ್‌ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಜೆಎಂಎಫ್‌ ನ್ಯಾಯಾಲಯಕ್ಕೆ ಸಲ್ಲಿಸಿರುವ ಬರೋಬ್ಬರಿ 800 ಪುಟಗಳ ಚಾಜ್‌ಶೀಟ್‌ನಲ್ಲಿ ಕೊಲೆಗೆ ಏನು ಕಾರಣ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖವಾಗಿದೆ.

ಜಾರ್ಜ್ ಶೀಟ್​ನಲ್ಲಿ ಪ್ರಕರಣದ ಮಹತ್ವದ ಅಂಶಗಳು ಉಲ್ಲೇಖವಾಗಿದ್ದು, ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿದ್ದ ಸರ್ವೆ ನಂಬರ್ 166/1, 5 ಎಕರೆ 11 ಗುಂಟೆ ಜಮೀನು ವಿಚಾರ ಚಂದ್ರಶೇಖರ ಗುರೂಜಿ ಕೊಲೆಗೆ ಮುಖ್ಯ ಕಾರಣ ಎಂದು ಚಾರ್ಜ್​ ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಜಮೀನು ಬಸವರೆಡ್ಡಿ ಎಂಬುವರ ಹೆಸರಿನಲ್ಲಿದ್ದು ಈತ ಸಹ ಸರಳವಾಸ್ತು ಕಂಪನಿಯ ಹಳೇ ಉದ್ಯೋಗಿಯಾಗಿದ್ದನು. ಗುರೂಜಿ ಕಂಪನಿ ಬಿಟ್ಟ ಬಳಿಕ ಮಹಾಂತೇಶ್, ಮಂಜುನಾಥ ಮತ್ತು ಬಸವರೆಡ್ಡಿ ಗುರೂಜಿ ವಿರುದ್ಧ ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದ್ದರು.

ಹೀಗಾಗಿ ಬಸವರೆಡ್ಡಿ ಹತ್ತಿರ ಇದ್ದ ಜಮೀನನ್ನು ಮಹಾಂತೇಶ್ ಹೆಸರಿಗೆ ವರ್ಗಾಯಿಸಿ ಮಾರಾಟ ಮಾಡಲು ಯೋಜನೆ ಮಾಡಿದ್ದರು ಎಂದು ಹೇಳಲಾಗಿದೆ. ಇನ್ನೂ ಈ ಕೊಲೆಯಲ್ಲಿ ಬಸವರೆಡ್ಡಿ ಪಾತ್ರವಿಲ್ಲ ಎನ್ನುವ ಅಂಶವೂ ಕೂಡ ಚಾರ್ಜ್​ ಶೀಟ್​ನಲ್ಲಿ ಪೊಲೀಸರು ಉಲ್ಲೇಖಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT