ಮದರಸಾದಲ್ಲಿ ಹಿಂದೂಗಳಿಂದ ಪೂಜೆ 
ರಾಜ್ಯ

ಮದರಸಾದಲ್ಲಿ ಹಿಂದೂಗಳಿಂದ ಪೂಜೆ, ಬೀದರ್ ಉದ್ವಿಗ್ನ; 9 ಮಂದಿ ವಿರುದ್ಧ ಕೇಸ್ ದಾಖಲು

ಹಿಂದೂಪರ ಸಂಘಟನೆಗಳ ದೊಡ್ಡ ಗುಂಪೊಂದು ಗುರುವಾರ ಬೆಳಗ್ಗೆ ನಗರದ 15ನೇ ಶತಮಾನದ ಐತಿಹಾಸಿಕ ಮೊಹಮ್ಮದ್ ಗವಾನ್ ಮಸೀದಿ ಹಾಗೂ ಮದರಸಾಗೆ ನುಗ್ಗಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿ ಪೂಜೆ ಸಲ್ಲಿಸಿದ...

ಬೀದರ್: ಹಿಂದೂಪರ ಸಂಘಟನೆಗಳ ದೊಡ್ಡ ಗುಂಪೊಂದು ಗುರುವಾರ ಬೆಳಗ್ಗೆ ನಗರದ 15ನೇ ಶತಮಾನದ ಐತಿಹಾಸಿಕ ಮೊಹಮ್ಮದ್ ಗವಾನ್ ಮಸೀದಿ ಹಾಗೂ ಮದರಸಾಗೆ ನುಗ್ಗಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿ ಪೂಜೆ ಸಲ್ಲಿಸಿದ ನಂತರ ಬೀದರ್ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ಘಟನೆಗೆ ಸಂಬಂಧಿಸಿದಂತೆ ಬೀದರ್ ಪೊಲೀಸರು ಒಂಬತ್ತು ಮಂದಿಯ ವಿರುದ್ಧ ಕೇಸ್ ದಾಖಲಿಸದ್ದಾರೆ ಎಂದು ವರದಿಗಳು ತಿಳಿಸಿವೆ. ಐತಿಹಾಸಿಕ ಸ್ಮಾರಕದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಮಹ್ಮದ್ ಗವಾನ್ ಸ್ಮಾರಕದ ಆವರಣದಲ್ಲಿರುವ ಮದರಸಾ ಮತ್ತು ಮಸೀದಿಯ ಮುಂಭಾಗದಲ್ಲಿ ಭವಾನಿ ದೇವಿಯ ಮೆರವಣಿಗೆ ಸಾಗುತ್ತಿರುವ ಸಂದರ್ಭದಲ್ಲಿ ಗುಂಪೊಂದು ಮದರಸಾ ಪ್ರವೇಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗೇಟ್ ಒಡೆದು ಮದರಸಾ ಪ್ರವೇಶಿಸಿದ ಗುಂಪು ಒಳಗೆ ಪ್ರಾರ್ಥನೆ ಸಲ್ಲಿಸಿ ಮತ್ತು ಘೋಷಣೆಗಳನ್ನು ಕೂಗಿದೆ.

ಸಂರಕ್ಷಿತ ಸ್ಮಾರಕದ ಬೀಗ ಮುರಿದು ಒಳ ನುಗ್ಗಿದ ಹಿಂದೂ ಕಾರ್ಯಕರ್ತರು, ಜೈ ಶ್ರೀರಾಮ್ ಮತ್ತು ಜೈ ಹಿಂದೂ ರಾಷ್ಟ್ರ ಘೋಷಣೆಗಳನ್ನು ಕೂಗಿದ್ದಾರೆ. ಬಳಿಕ ಕಟ್ಟಡದ ಒಂದು ಮೂಲೆಯಲ್ಲಿ ಹಿಂದೂ ಸಂಪ್ರದಾಯದಂತೆ ಪೂಜೆ ಸಲ್ಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಖಂಡಿಸಿ ಬೀದರ್‌ನಲ್ಲಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶುಕ್ರವಾರದ ಪ್ರಾರ್ಥನೆಯ ನಂತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಅವರು "ಉಗ್ರರು ಗೇಟ್ ಬೀಗವನ್ನು ಮುರಿದು ಐತಿಹಾಸಿಕ ಮಸೀದಿಯನ್ನು ಅಪವಿತ್ರಗೊಳಿಸಲು ಪ್ರಯತ್ನಿಸಿದ್ದಾರೆ" ಎಂದು ಟ್ವೀಟ್ ಮಾಡಿದ್ದಾರೆ.

"ಇದಕ್ಕೆ ನೀವು ಹೇಗೆ ಅವಕಾಶ ನೀಡುತ್ತೀರಿ? ಬಿಜೆಪಿ ಕೇವಲ ಮುಸ್ಲಿಮರನ್ನು ಕೀಳಾಗಿ ನೋಡುವುದಕ್ಕೆ ಇಂತಹ ಚಟುವಟಿಕೆಯನ್ನು ಉತ್ತೇಜಿಸುತ್ತಿದೆ" ಎಂದು ಓವೈಸಿ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT