ಸಾಂದರ್ಭಿಕ ಚಿತ್ರ 
ರಾಜ್ಯ

ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತ; ನೀರಿನಲ್ಲಿ ಮುಳುಗಿ ಇಬ್ಬರ ಸಾವು

ರಾಜ್ಯದಲ್ಲಿ ಗಣೇಶ ಮೂರ್ತಿ ವಿಸರ್ಜನೆ ದುರಂತ ಸರಣಿ ಮುಂದುವರೆದಿದ್ದು, ಇಂದು ಹಾಸನದಲ್ಲಿ ಈಜಲು ಹೋಗಿ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ.

ಹಾಸನ: ರಾಜ್ಯದಲ್ಲಿ ಗಣೇಶ ಮೂರ್ತಿ ವಿಸರ್ಜನೆ ದುರಂತ ಸರಣಿ ಮುಂದುವರೆದಿದ್ದು, ಇಂದು ಹಾಸನದಲ್ಲಿ ಈಜಲು ಹೋಗಿ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ.

ಗುರುವಾರ ರಾತ್ರಿ ಹಾಸನದ ಅರಸೀಕೆರೆ ತಾಲೂಕಿನ ವಡಗೇರಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಈಜಲು ಹೋಗಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. 

ಮೃತರನ್ನು ಪ್ರವೀಣ್ (27 ವರ್ಷ) ಮತ್ತು ನಾಗರಾಜ್ (31 ವರ್ಷ) ಎಂದು ಗುರುತಿಸಲಾಗಿದೆ. ಗಣೇಶ ಮೆರವಣಿಗೆಯ ನಂತರ ಗಣೇಶ ಮೂರ್ತಿಯ ವಿಸರ್ಜಿಸಿದ ಬಳಿಕ ಇಬ್ಬರೂ ಈಜುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಪೊಲೀಸರು ಗ್ರಾಮಸ್ಥರ ನೆರವಿನೊಂದಿಗೆ ಮೃತದೇಹಗಳನ್ನು ಹೊರತೆಗೆದು ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ. 

ದುರದೃಷ್ಟವಶಾತ್ ಬೆಂಗಳೂರಿನಿಂದ ಬಂದಿದ್ದ ನಾಗರಾಜ್ ಅವರ ಅಣ್ಣ ಮಧು ಎಂಬಾತ ಶುಕ್ರವಾರ ಆಸ್ಪತ್ರೆಯಲ್ಲಿ ಮೃತ ಸಹೋದರನನ್ನು ನೋಡುವ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.  ಗ್ರಾಮಸ್ಥರ ಪ್ರಕಾರ, ಮೃತ ನಾಗರಾಜ್ ಮತ್ತು ಪ್ರವೀಣ್ ಗ್ರಾಮದ ಮುಖಂಡರ ಎಚ್ಚರಿಕೆಯನ್ನು ಲೆಕ್ಕಿಸದೆ ವಿಗ್ರಹವನ್ನು ಮುಳುಗಿಸಿದ ನಂತರ ತುಂಬಿದ ಹಳ್ಳಕ್ಕೆ ಹಾರಿದ್ದಾರೆ. ಈ ವೇಳೆ ಆಯತಪ್ಪಿ ನಿಯಂತ್ರಣ ಸಿಗದೇ ಮುಳುಗಿದ್ದಾರೆ. ಸ್ಥಳದಲ್ಲಿದ್ದ ಜನರು ಅವರನ್ನು ರಕ್ಷಿಸಲು ಮುಂದಾದರಾದರೂ ಅದು ಸಾಧ್ಯವಾಗಲಿಲ್ಲ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT