ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಪ್ರವೀಣ್ ಕುಮಾರ್ ನೆಟ್ಟಾರು ಪತ್ನಿ ನೂತನ 
ರಾಜ್ಯ

ಗ್ರೂಪ್ ಸಿ ಹುದ್ದೆ ನೀಡಿ ಮಂಗಳೂರಿನಲ್ಲಿ ಕೆಲಸ ಮಾಡಲು ಅನುಮತಿ: ಸಿಎಂಗೆ ಧನ್ಯವಾದ ಹೇಳಿದ ದಿ.ಪ್ರವೀಣ್ ನೆಟ್ಟಾರು ಪತ್ನಿ

ದುಷ್ಕರ್ಮಿಗಳಿಂದ ಕಳೆದ ಆಗಸ್ಟ್ ನಲ್ಲಿ ಹತ್ಯೆಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು (Praveen Kumar Nettar) ಅವರ ಪತ್ನಿ ನೂತನ ಅವರಿಗೆ ಸರ್ಕಾರ ಗ್ರೂಪ್ ಸಿ ಹುದ್ದೆಯ ಗುತ್ತಿಗೆ ಆಧಾರಿತ ನೌಕರಿ ನೀಡಿದ್ದು ಅದಕ್ಕೆ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.

ಬೆಂಗಳೂರು: ದುಷ್ಕರ್ಮಿಗಳಿಂದ ಕಳೆದ ಆಗಸ್ಟ್ ನಲ್ಲಿ ಹತ್ಯೆಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು (Praveen Kumar Nettar) ಅವರ ಪತ್ನಿ ನೂತನ ಅವರಿಗೆ ಸರ್ಕಾರ ಗ್ರೂಪ್ ಸಿ ಹುದ್ದೆಯ ಗುತ್ತಿಗೆ ಆಧಾರಿತ ನೌಕರಿ ನೀಡಿದ್ದು ಅದಕ್ಕೆ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.

ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಸರ್ಕಾರದಿಂದ ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ನೂತನ ಧನ್ಯವಾದ ಸಲ್ಲಿಸಿದ್ದಾರೆ.

ಪ್ರವೀಣ್ ಕುಮಾರ್ ನೆಟ್ಟಾರು ಅವರ ಪತ್ನಿ ನೂತನ ಅವರು ಬಿಜೆಪಿ ರಾಜ್ಯಾದ್ಯಕ್ಷರಾದ ನಳಿನ್ ಕುಮಾರ್ ಕಟೀಲ್ (Nalinkumar Kateel) ಅವರೊಂದಿಗೆ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಸರ್ಕಾರದಿಂದ ಕೆಲಸ ಕೊಡಿಸಿ ಮಂಗಳೂರಿನಲ್ಲಿ ಕಾರ್ಯನಿರ್ವಹಿಸಲು ಸಹಕರಿಸಿದಕ್ಕಾಗಿ ಧನ್ಯವಾದ ಸಮರ್ಪಿಸಿದರು.

ಸರ್ಕಾರದಿಂದ ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿ ಸಿಎಂ ಕಚೇರಿಯಲ್ಲಿ ಕೆಲಸ ಕೊಡುವುದಾಗಿ ಸಿಎಂ ಹೇಳಿದ್ದರು. ಈ ವೇಳೆ ಮಂಗಳೂರಿನಲ್ಲಿ ಕೆಲಸ ಕೊಡುವಂತೆ ನೂತನ ಹಾಗೂ ಮನೆಯವರು ಕೇಳಿಕೊಂಡಿದ್ದರು. ಇದನ್ನು ಮನಗಂಡು ಬೊಮ್ಮಾಯಿ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT