ಟಿಪ್ಪು ಎಕ್ಸ್‌ಪ್ರೆಸ್‌ ಮರುನಾಮಕರಣ 
ರಾಜ್ಯ

ಟಿಪ್ಪು ಎಕ್ಸ್‌ಪ್ರೆಸ್‌ ಮರುನಾಮಕರಣ ಮಾಡಿ ಸಮಾಜವನ್ನು ಒಡೆದ ಬಿಜೆಪಿ: ಕಾಂಗ್ರೆಸ್‌ ಆಕ್ರೋಶ

ಟಿಪ್ಪು ಎಕ್ಸ್‌ಪ್ರೆಸ್‌ ಮರುನಾಮಕರಣ ಮಾಡಿ ಸಮಾಜವನ್ನು ಬಿಜೆಪಿ ಒಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಮೈಸೂರು: ಟಿಪ್ಪು ಎಕ್ಸ್‌ಪ್ರೆಸ್‌ ಮರುನಾಮಕರಣ ಮಾಡಿ ಸಮಾಜವನ್ನು ಬಿಜೆಪಿ ಒಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಟಿಪ್ಪು ಎಕ್ಸ್‌ಪ್ರೆಸ್‌ಗೆ ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಿರುವ ಬಗ್ಗೆ ಕಾಂಗ್ರೆಸ್ ಎಂಎಲ್`ಸಿ ಡಿ ತಿಮ್ಮಯ್ಯ ಅವರು ಕೇಂದ್ರ ಮತ್ತು ರೈಲ್ವೆ ಸಚಿವಾಲಯದ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ತಿಮ್ಮಯ್ಯ, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

"ಇದು ದುರದೃಷ್ಟಕರ ನಡೆ ಮತ್ತು ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಬಿಜೆಪಿಯಂತಹ ರಾಷ್ಟ್ರೀಯ ಪಕ್ಷಗಳು ಧರ್ಮದ ಹೆಸರಿನಲ್ಲಿ ಇಂತಹ ರಾಜಕಾರಣ ಮಾಡಬಾರದು. ಅದೊಂದು ನೀಚ ಕೃತ್ಯ. ರೈಲಿಗೆ ಟಿಪ್ಪು ಹೆಸರು ಬದಲಿಸಿ ಬಿಜೆಪಿ ಯಶಸ್ಸು ಸಾಧಿಸಿದೆಯೇ? ಸಾರ್ವಜನಿಕರಿಂದ ಬೇಡಿಕೆ ಬಾರದಿದ್ದರೂ ಸರ್ಕಾರ ಹೆಸರು ಬದಲಿಸಿದೆ. ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕಲು ಅವರು ಇದನ್ನು ಮಾಡಿದ್ದಾರೆ ಎಂದು ಅವರು ಕಿಡಿಕಾರಿದರು.

"ಹೆಸರಿಸದ ಹಲವಾರು ರೈಲುಗಳು ಇದ್ದವು. ಟಿಪ್ಪು ಎಕ್ಸ್‌ಪ್ರೆಸ್‌ಗೆ ಮರುನಾಮಕರಣ ಮಾಡುವ ಬದಲು, ಹಿಂದಿನ ಮೈಸೂರು ರಾಜಮನೆತನದ ಹೆಸರನ್ನು ಸರ್ಕಾರವು ಇತರೆ ರೈಲುಗಳಿಗೆ ಮರುನಾಮಕರಣ ಮಾಡಬೇಕಿತ್ತು. ಬದಲಿಗೆ ನಿರುದ್ಯೋಗ, ಬೆಲೆ ಏರಿಕೆ, ದಲಿತರ ರಕ್ಷಣೆ, ರೈತರಿಗೆ ಭದ್ರತೆ ನೀಡುವ ಕಾರ್ಯಕ್ರಮಗಳನ್ನು ಜಾರಿಗೆ ತರಲು ಬಿಜೆಪಿ ಸರ್ಕಾರಕ್ಕೆ ಸಲಹೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT