ಕುದಿಯುವ ಎಣ್ಣೆಯಲ್ಲಿ ಕೈಯನ್ನು ಅದ್ದಿದ ಭಕ್ತರೊಬ್ಬರು 
ರಾಜ್ಯ

ದೇವಿಯ ಆಶೀರ್ವಾದಕ್ಕಾಗಿ ಕುದಿಯುವ ಎಣ್ಣೆಯಲ್ಲಿ ಕೈ ಮುಳುಗಿಸುತ್ತಾರೆ; ಕುಮಟಾದಲ್ಲೊಂದು ವಿಶಿಷ್ಟ ಧಾರ್ಮಿಕ ಆಚರಣೆ

ಇತ್ತೀಚೆಗೆ ಕನಿಷ್ಠ ಒಂದು ಸಾವಿರ ಜನರು ದೇವಾಲಯಕ್ಕೆ ಭೇಟಿ ನೀಡಿದ್ದರು. ಪ್ರತಿವರ್ಷವೂ ಇಲ್ಲೊಂದು ವಿಶೇಷ ಆಚರಣೆ ನಡೆಯುತ್ತದೆ. ಅದು ಪವಾಡವೇ ಸರಿ. ಇಲ್ಲಿಗೆ ಬರುವ ಭಕ್ತರು ಹರಕೆಯನ್ನು ತೀರಿಸಲು ತಮ್ಮ ಕೈಗಳನ್ನು ಕುದಿಯುವ ಎಣ್ಣೆಯಲ್ಲಿ ಮುಳುಗಿಸುತ್ತಾರೆ.

ಕುಮಟಾ (ಉತ್ತರ ಕನ್ನಡ): ಇಲ್ಲೊಂದು ವಿಶಿಷ್ಟ ಧಾರ್ಮಿಕ ಆಚರಣೆ ಇದೆ. ಈ ದೇವಸ್ಥಾನದಲ್ಲಿ ದೇವರ ಅನುಗ್ರಹಕ್ಕಾಗಿ ಕೋರಿ ಬರುವವರೇ ಅಧಿಕ. ಕುಮಟಾದ ರಾಯೇಶ್ವರಿ ಕಾಮಾಕ್ಷಿ ದೇವಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ.

ಇತ್ತೀಚೆಗೆ ಕನಿಷ್ಠ ಒಂದು ಸಾವಿರ ಜನರು ದೇವಾಲಯಕ್ಕೆ ಭೇಟಿ ನೀಡಿದ್ದರು. ಪ್ರತಿವರ್ಷವೂ ಇಲ್ಲೊಂದು ವಿಶೇಷ ಆಚರಣೆ ನಡೆಯುತ್ತದೆ. ಅದು ಪವಾಡವೇ ಸರಿ. ಇಲ್ಲಿಗೆ ಬರುವ ಭಕ್ತರು ಹರಕೆಯನ್ನು ತೀರಿಸಲು ತಮ್ಮ ಕೈಗಳನ್ನು ಕುದಿಯುವ ಎಣ್ಣೆಯಲ್ಲಿ ಮುಳುಗಿಸುತ್ತಾರೆ.

ಇಲ್ಲಿ ದೇವರಿಗೆ ವಿಶೇಷ ಪೂಜೆಯನ್ನು ಆಯೋಜಿಸಲಾಗಿರುತ್ತದೆ. ಪೂಜೆ ಮುಗಿದ ನಂತರ, ಅರ್ಚಕರು ಹೊರಬಂದು ಕುದಿಯುವ ಎಣ್ಣೆ ಮತ್ತು 'ವಡೆ'ಗಳನ್ನು ಹೊಂದಿದ್ದ ಬಾಣಲೆಯ ಸುತ್ತಲೂ ಹೂವುಗಳನ್ನು ಎಸೆಯುತ್ತಾರೆ. ಬಹುನಿರೀಕ್ಷಿತ ಕಾರ್ಯಕ್ರಮವು ಅಲ್ಲಿಗೆ ಪ್ರಾರಂಭವಾಗುತ್ತದೆ. ಕುದಿಯುತ್ತಿರುವ ಎಣ್ಣೆಯಿರುವ ಒಲೆಯ ಮುಂದೆ ವ್ಯಕ್ತಿಯೊಬ್ಬರು ಬರುತ್ತಾರೆ. ದೇವರಿಗೆ ನಮಸ್ಕರಿಸಿದ ನಂತರ, ಅವರು ತಮ್ಮ ಬೆರಳುಗಳನ್ನು ಬಿಸಿ ಎಣ್ಣೆಯಲ್ಲಿ ಮುಳುಗಿಸಿ, ಅದರಲ್ಲಿ ತೇಲುತ್ತಿರುವ ‘ವಡೆ’ಗಳನ್ನು ಹೊರತೆಗೆದು ದೇವರಿಗೆ ಮತ್ತೆ ನಮಸ್ಕರಿಸುತ್ತಾರೆ. ಆಶ್ಚರ್ಯಕರವಾಗಿ, ಅವರಿಗೆ ಯಾವುದೇ ಸುಟ್ಟಗಾಯಗಳು ಆಗಲಿಲ್ಲ.

ನೂರಾರು ಜನರು ತಮ್ಮ ಹರಕೆ ತೀರಿಸುವುದರೊಂದಿಗೆ ಕಾರ್ಯಕ್ರಮ ನಡೆಯಿತು. ಇದೊಂದು ಪವಾಡ ಎಂದು ಭಕ್ತರು ಹೇಳಿದ್ದು, ಹಿಂದಿನಿಂದಲೂ ಆಚರಣೆಯಲ್ಲಿದೆ. 'ತನ್ನ ಕೈಗಳನ್ನು ಎಣ್ಣೆಯಲ್ಲಿ ಮುಳುಗಿಸಿದವರಿಗೆ ಏನೂ ಆಗದಿದ್ದರೆ, ದೇವಿಯು ಆತನನ್ನು ಅಥವಾ ಆಕೆಯನ್ನು ಆಶೀರ್ವದಿಸಿದ್ದಾಳೆ' ಎಂದರ್ಥ ಎಂದು ಅರ್ಚಕರು ಹೇಳುತ್ತಾರೆ.

ದೇವಿಯ ಆಶೀರ್ವಾದವನ್ನು ಕೋರಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ, ಹರಕೆ ತೀರಿಸುವ ಯಾವುದೇ ವ್ಯಕ್ತಿ ಈ ದೇವಸ್ಥಾನಕ್ಕೆ ಭೇಟಿ ನೀಡಿ ಈ ವಿಧಿವಿಧಾನ ನೆರವೇರಿಸಿ ತಮ್ಮ ಹರಕೆಯನ್ನು ಪೂರೈಸುತ್ತಾರೆ ಎಂದು ಪ್ರತಿ ವರ್ಷ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ಭಕ್ತ ರಾಜು ನಾಯ್ಕ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

BJP ಸೇರಿದ 7 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಉಪರಾಷ್ಟ್ರಪತಿಗೆ AAP ಪತ್ರ: ಸಂಜಯ್ ಸಿಂಗ್

ಒಳ್ಳೆಯವರ್ಯಾರೂ Arvind Kejriwal ಜೊತೆ ಕೆಲಸ ಮಾಡಲು ಸಾಧ್ಯವೇ ಇಲ್ಲ: ರಾಘವ್ ಚಡ್ಡಾ BJP ಸೇರ್ಪಡೆ ಕುರಿತು Swati Maliwal

ಅರಮನೆಯಂತಾದ 'ಕಾಮನ್​ ಮ್ಯಾನ್'​​ ಕೇಜ್ರಿವಾಲ್​ ನಿವಾಸ: Sheesh Mahal 2 ಎಂದು BJP ಟೀಕೆ; AAP ಮಾನನಷ್ಟ ಮೊಕದ್ದಮೆ ಎಚ್ಚರಿಕೆ! Video

ಕಾಂತಾರ ಮಿಮಿಕ್ರಿ ವಿವಾದ: ತಿಂಗಳೊಳಗೆ ಚಾಮುಂಡಿ ಬೆಟ್ಟಕ್ಕೆ ರಣವೀರ್‌ ಭೇಟಿಗೆ ಹೈಕೋರ್ಟ್ ಸೂಚನೆ; ಅರ್ಜಿ ಇತ್ಯರ್ಥ!

ಬೆದರಿಕೆ ರಾಜಕಾರಣದ ವಿರುದ್ಧ ಅಂತಿಮವಾಗಿ ಗೆಲ್ಲುವುದು ನ್ಯಾಯವೇ: ಪವನ್ ಖೇರಾ ಬೆನ್ನಿಗೆ ನಿಂತ ಕಾಂಗ್ರೆಸ್

SCROLL FOR NEXT