ನಿರ್ಮಾಣ ಹಂತದ ಕಟ್ಟಡದ ಸಂಪ್ ನಲ್ಲಿ ಪತ್ತೆಯಾದ ದಿವ್ಯಾ ಮೃತದೇಹ 
ರಾಜ್ಯ

ಮಳವಳ್ಳಿ: ಟ್ಯೂಶನ್ ಗೆಂದು ಹೋಗಿದ್ದ ಬಾಲಕಿ ಸಂಪ್ ನಲ್ಲಿ ಶವವಾಗಿ ಪತ್ತೆ; ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು

ಟ್ಯೂಶನ್‍ಗೆ ಹೋದ ಬಾಲಕಿ ನೀರಿನ ಸಂಪ್‍ನಲ್ಲಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಮಳವಳ್ಳಿ ಪಟ್ಟಣದ ಎನ್‍ಇಎಸ್ ಬಡಾವಣೆಯ ಅಶ್ವಿನಿ ಮತ್ತು ಸುರೇಶ್ ಕುಮಾರ್ ದಂಪತಿಯ ಪುತ್ರಿ 10 ವರ್ಷದ ದಿವ್ಯಾ ಶವವಾಗಿ ಪತ್ತೆಯಾಗಿರುವ ಬಾಲಕಿಯಾಗಿದ್ದಾಳೆ. 

ಮಂಡ್ಯ: ಟ್ಯೂಶನ್‍ಗೆ ಹೋದ ಬಾಲಕಿ ನೀರಿನ ಸಂಪ್‍ನಲ್ಲಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಮಳವಳ್ಳಿ ಪಟ್ಟಣದ ಎನ್‍ಇಎಸ್ ಬಡಾವಣೆಯ ಅಶ್ವಿನಿ ಮತ್ತು ಸುರೇಶ್ ಕುಮಾರ್ ದಂಪತಿಯ ಪುತ್ರಿ 10 ವರ್ಷದ ದಿವ್ಯಾ ಶವವಾಗಿ ಪತ್ತೆಯಾಗಿರುವ ಬಾಲಕಿಯಾಗಿದ್ದಾಳೆ. 

ನಿನ್ನೆ ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ದಿವ್ಯಾ ಪಾಠ ಹೇಳಿಸಿಕೊಳ್ಳಲೆಂದು 45 ವರ್ಷದ ಟ್ಯೂಶನ್ ಶಿಕ್ಷಕ ಕಾಂತರಾಜು ಅವರ ಬಳಿ ಹೋಗಿದ್ದಳು.  ಬೆಳಗ್ಗೆ ಮನೆಯಿಂದ ಟ್ಯೂಶನ್ ಗೆಂದು ಹೋದವಳು ಮಧ್ಯಾಹ್ನ, ಸಂಜೆಯಾದರೂ ಮನೆಗೆ ಬಾರದಿದ್ದಾಗ ಪೋಷಕರು  ಆತಂಕಗೊಂಡು ಟ್ಯೂಶನ್ ಸೆಂಟರ್ ಮತ್ತು ಅಕ್ಕಪಕ್ಕದಲ್ಲಿ ವಿಚಾರಿಸಿದ್ದಾರೆ, ಆದರೆ ಎಲ್ಲಿಯೂ ಪತ್ತೆಯಾಗಲಿಲ್ಲ.

ಇದಾದ ನಂತರ ಸ್ಥಳೀಯರು ಬಾಲಕಿ ಹೊರಹೋಗಿರುವುದನ್ನು ಕಂಡು ನೀಡಿದ ಮಾಹಿತಿ ಮೇರೆಗೆ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗ ನಾಗರಾಜು ಎಂಬುವರ ನಿರ್ಮಾಣ ಹಂತದ ಮನೆಯ ಕಟ್ಟಡದ ಸಮೀಪದಲ್ಲಿದ್ದ ನೀರಿನ ಸಂಪ್‍ನಲ್ಲಿ ಪರಿಶೀಲನೆ ನಡೆಸಿದಾಗ ಬಾಲಕಿಯ ಶವ ಪತ್ತೆಯಾಗಿದೆ.

ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಲಕಿ ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಡಿವೈಎಸ್‍ಪಿ ಎನ್.ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಶ್ವಾನದಾಳದೊಂದಿಗೆ ಪರಿಶೀಲನೆ ನಡೆಸಿದ್ದಾರೆ. ಟ್ಯೂಶನ್ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!