ರಾಜ್ಯ

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಧರ್ಮಸ್ಥಳ ಧರ್ಮಾಧಿಕಾರಿಗಳು

Sumana Upadhyaya

ಬೆಂಗಳೂರು: ಧರ್ಮಸ್ಥಳ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು ಇಂದು ಬುಧವಾರ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ, ಜೆಡಿಎಸ್ ನಾಯಕ ದೇವೇಗೌಡರ ನಿವಾಸಕ್ಕೆ ತೆರಳಿ ಅವರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಅವರ ಸೋದರ ಹರ್ಷೇಂದ್ರ ಜತೆಗಿದ್ದರು. ಮೊಣಕಾಲು ನೋವು ಮತ್ತು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ದೇವೇಗೌಡರು ಸಕ್ರಿಯ ರಾಜಕೀಯ ಚಟುವಟಿಕೆಗಳಿಂದ ಕೊಂಚ ದೂರವುಳಿದು ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಇತ್ತೀಚೆಗೆ ಪಕ್ಷಾತೀತವಾಗಿ ರಾಜಕೀಯ ನಾಯಕರು ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿದ್ದರು. ವೀರೇಂದ್ರ ಹೆಗ್ಗಡೆಯವರು ಇತ್ತೀಚೆಗೆ ಬಿಜೆಪಿಯಿಂದ ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದರು. 

SCROLL FOR NEXT