ವಿಧಾನಸೌಧ 
ರಾಜ್ಯ

ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ, ನವೆಂಬರ್ 1 ರಿಂದ ನೋಂದಣಿ ಆರಂಭ

ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ನೋಂದಣಿ ಆರಂಭವಾಗಲಿದೆ.

ಬೆಂಗಳೂರು: ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ನೋಂದಣಿ ಆರಂಭವಾಗಲಿದೆ.

ಯಶಸ್ವಿನಿ ಯೋಜನೆಗಾಗಿ ರೈತರು ಹಾಗೂ  ಸಹಕಾರಿ ಸಂಘಗಳು ಬೇಡಿಕೆ ಮುಂದಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಯಶಸ್ವಿನಿ ಯೋಜನೆ ಅಡಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸೆ ವೆಚ್ಚ 5 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ. 4 ಸದಸ್ಯರ ಕುಟುಂಬಕ್ಕೆ ವರ್ಷಕ್ಕೆ 500 ರೂಪಾಯಿ ವಂತಿಕೆ ಕಟ್ಟಬೇಕಾಗಿದೆ.

ನೊಂದಣಿ ಪ್ರಕ್ರಿಯೆಯನ್ನು ನವೆಂಬರ್ 1, 2022 ರಿಂದ ಪ್ರಾರಂಭವಾಗಲಿದೆ. ಯಶಸ್ವಿ ಯೋಜನೆ ಅವಧಿ 01-01-2023 ರಿಂದ 30-12-2023 ರವರೆಗೂ ಜಾರಿಯಲ್ಲಿರುತ್ತದೆ. 1650 ಖಾಯಿಲೆಗಳಿಗೆ ಈ ಯೋಜನೆ ಅಡಿ ಚಿಕಿತ್ಸೆ ನೀಡಲಾಗುತ್ತದೆ.

ಮಾರ್ಗಸೂಚಿ ಪ್ರಕಾರ, ಸಹಕಾರ ಸಂಘಗಳ ಸದಸ್ಯರು, ಗ್ರಾಮೀಣ ಸ್ವ ಸಹಾಯ ಗುಂಪುಗಳ ಸದಸ್ಯರು ಮತ್ತು ಅವರ ಕುಟುಂಬ ವರ್ಗದವರು, ಸಹಕಾರಿ ಮೀನುಗಾರರು, ಸಹಕಾರಿ ಬೀಡಿ ಕಾರ್ಮಿಕರು, ಸಹಕಾರಿ ನೇಕಾರರಿಗೆ ಈ ಯೋಜನೆ ಅನ್ವಯವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT