ಮೀಸಲಾತಿ ಪ್ರತಿಭಟನೆ(ಸಂಗ್ರಹ ಚಿತ್ರ) 
ರಾಜ್ಯ

2ಎ ಮೀಸಲಾತಿಗೆ ಒತ್ತಾಯಿಸಿ ಅಕ್ಟೋಬರ್ 21 ರಂದು ಹುಕ್ಕೇರಿಯಲ್ಲಿ ಬೃಹತ್ ಪಂಚಮಸಾಲಿ ಸಮಾವೇಶ

ಅಕ್ಟೋಬರ್ 21ರೊಳಗೆ ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರದಲ್ಲಿ ಸ್ಪಷ್ಟ ನಿರ್ಧಾರವನ್ನು ಸರ್ಕಾರ ಪ್ರಕಟಿಸಬೇಕು ಎಂದು ಪಂಚಮಸಾಲಿ ಮಠದ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಅಕ್ಟೋಬರ್ 21ರೊಳಗೆ ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರದಲ್ಲಿ ಸ್ಪಷ್ಟ ನಿರ್ಧಾರವನ್ನು ಸರ್ಕಾರ ಪ್ರಕಟಿಸಬೇಕು ಎಂದು ಪಂಚಮಸಾಲಿ ಮಠದ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಾಡುತ್ತಿರುವ ಹೋರಾಟ 2 ವರ್ಷ ತಲುಪಿದೆ. ಆದರೂ ಸರ್ಕಾರ ಯಾವುದೇ ತೀರ್ಮಾನ ನೀಡದೆ ಸುಮ್ಮನಾಗಿದೆ ಎಂದು ಕಿಡಿಕಾರಿದರು.

ಇನ್ನು ಹುಕ್ಕೇರಿಯಲ್ಲಿ ಅ.21 ರಂದು ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ ನಡೆಯಲಿದೆ. ಅಷ್ಟರೊಳಗೆ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದು ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ಕೊಡುವ ಸಂಬಂಧ ಅಂತಿಮ ತೀರ್ಮಾನ ಕೈಗೊಳ್ಳಬೇಕು. ಇಲ್ಲದೆ ಇದ್ದರೆ ಹುಕ್ಕೇರಿ ಸಮಾವೇಶದಲ್ಲಿ ವಿಧಾನಸೌಧ ಮುತ್ತಿಗೆಗೆ ಕರೆ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಅಲ್ಪಸಂಖ್ಯಾತರ ಮೀಸಲಾತಿ ಕಿತ್ತು ನಮಗೆ ಕೊಡುವುದು ಬೇಡ ಹುಕ್ಕೇರಿ ಪಂಚಮಸಾಲಿ ಸಮಾವೇಶಕ್ಕೂ ಮೊದಲು ನಿಲುವು ತಿಳಿಸಬೇಕು. ಈಗಾಗಲೇ ಸರ್ಕಾರ ಲಿಂಗಾಯತ ಸಮುದಾಯದ 21 ಉಪಪಂಗಡಗಳಿಗೆ 2 ಎ ಮೀಸಲಾತಿ ಸ್ಥಾನ ನೀಡಿದೆ. ಅದೇ ರೀತಿಯಲ್ಲಿ ಸರ್ಕಾರ ನಮ್ಮ ಸಮುದಾಯಕ್ಕೂ ನೀಡಲಿ ಎಂಬುವುದು ನಮ್ಮ ಹಕ್ಕೊತ್ತಾಯವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT