ಸಾಂದರ್ಭಿಕ ಚಿತ್ರ 
ರಾಜ್ಯ

ಸಿವಿಲ್ ಪೊಲೀಸ್ ಪೇದೆಯ 1137 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ; ತೃತೀಯ ಲಿಂಗಿಗಳಿಗೂ ಅವಕಾಶ; ಆನ್ ಲೈನ್ ನಲ್ಲೂ ಸಲ್ಲಿಸಬಹುದು!

ಕರ್ನಾಟಕ ಸಿವಿಲ್ ಪೊಲೀಸ್ ಪೇದೆಗಳ (ಸಿಪಿಸಿ) 1137 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು,  ರಾಜ್ಯ ಪೊಲೀಸ್‌ ಇಲಾಖೆಯು ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಬೆಂಗಳೂರು: ಕರ್ನಾಟಕ ಸಿವಿಲ್ ಪೊಲೀಸ್ ಪೇದೆಗಳ (ಸಿಪಿಸಿ) 1137 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು,  ರಾಜ್ಯ ಪೊಲೀಸ್‌ ಇಲಾಖೆಯು ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದು, ಅರ್ಜಿ ಸ್ವೀಕಾರ ಪ್ರಕ್ರಿಯೆ 2022 ಅಕ್ಟೋಬರ್ 20ರಿಂದ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಕೊನೆ ದಿನಾಂಕ 2022ರ ನವಂಬರ್ 21ರ ಸಂಜೆ ಆರು ಗಂಟೆವರೆಗೆ ಅವಕಾಶ ಇರಲಿದೆ. ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ 2022ರ ನವಂಬರ್ 23. ಆನ್‌ಲೈನ್ ಅಥವಾ ಅಧಿಕೃತ ಬ್ಯಾಂಕ್ ಶಾಖೆಗಳು ಅಥವಾ ಸ್ಥಳೀಯ ಅಂಚೆ ಕಚೇರಿಗಳ ಮೂಲಕ ಪಾವತಿಸಬಹುದು.

ಪೊಲೀಸ್ ಕಾನ್‌ಸ್ಟೇಬಲ್ (ನಾಗರಿಕ) ಪುರುಷ ಅಭ್ಯರ್ಥಿಗಳಿಗೆ 683, ಮಹಿಳೆಯರಿಗೆ 229, ಪುರುಷ ತೃತೀಯ ಲಿಂಗ 22 ಹಾಗೂ ಮಹಿಳಾ ತೃತೀಯ ಲಿಂಗದ ಅಭ್ಯರ್ಥಿಗಳಿಗೆ 10 ಹುದ್ದೆಗಳು ಖಾಲಿ ಇವೆ. ಜೊತೆಗೆ ಸೇವಾನಿರತ ಪೊಲೀಸ್ ಕಾನ್‌ಸ್ಟೇಬಲ್ (ನಾಗರಿಕ) ಪುರುಷರ 134, ಮಹಿಳೆ 57, ಪುರುಷ ತೃತೀಯ ಲಿಂಗ 1 ಹಾಗೂ ಮಹಿಳಾ ತೃತೀಯ ಲಿಂಗ 1 ಹುದ್ದೆಗಳು ಖಾಲಿ ಇದ್ದು, ಒಟ್ಟು ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್‌ಗಳಿಗಾಗಿ 1137 ಹುದ್ದೆಗಳು ಖಾಲಿ ಇವೆ.

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ https://ksp.karnataka.gov.in/ ಅಥವಾ https://recruitment.ksp.gov.in/  ಗಳಲ್ಲಿ ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬೇಕಾಗಿದೆ. ನೇರವಾಗಿ ಅಥವಾ ಅಂಚೆ ಮೂಲಕ ಅರ್ಜಿಗಳನ್ನು ಕಳಿಸಲು ಅವಕಾಶ ಇರುವುದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ