ಹೈಕೋರ್ಟ್ 
ರಾಜ್ಯ

ಟ್ಯಾಕ್ಸಿ ಕಂಪನಿಗಳು ಸರ್ಕಾರ ನಿಗದಿಪಡಿಸಿದ ದರದ ಮೇಲೆ ಶೇ. 10 ಹೆಚ್ಚುವರಿ ಹಾಗೂ ಜಿಎಸ್ ಟಿ ವಿಧಿಸಲು ಹೈಕೋರ್ಟ್ ಅಸ್ತು

ಆಪ್ ಆಧಾರಿತ ಆಟೋರಿಕ್ಷಾ ಸೇವೆಗಳಿಗೆ ದರ ನಿಗದಿಪಡಿಸುವ ಕುರಿತು ರಾಜ್ಯ ಸರ್ಕಾರ ನಡೆಸಿದ ಹೊಸ ಸುತ್ತಿನ ಮಾತುಕತೆಯಲ್ಲಿ ಯಾವುದೇ ಒಮ್ಮತದ ನಿರ್ಧಾರಕ್ಕೆ ಬರದ ಕಾರಣ, ಹೈಕೋರ್ಟ್ ಶುಕ್ರವಾರ ಟ್ಯಾಕ್ಸಿ ಸಂಸ್ಥೆಗಳು ಆಟೋರಿಕ್ಷಾ...

ಬೆಂಗಳೂರು: ಆಪ್ ಆಧಾರಿತ ಆಟೋರಿಕ್ಷಾ ಸೇವೆಗಳಿಗೆ ದರ ನಿಗದಿಪಡಿಸುವ ಕುರಿತು ರಾಜ್ಯ ಸರ್ಕಾರ ನಡೆಸಿದ ಹೊಸ ಸುತ್ತಿನ ಮಾತುಕತೆಯಲ್ಲಿ ಯಾವುದೇ ಒಮ್ಮತದ ನಿರ್ಧಾರಕ್ಕೆ ಬರದ ಕಾರಣ, ಹೈಕೋರ್ಟ್ ಶುಕ್ರವಾರ ಟ್ಯಾಕ್ಸಿ ಸಂಸ್ಥೆಗಳು ಆಟೋರಿಕ್ಷಾ ಸೇವೆಗೆ ಸರ್ಕಾರ ನಿಗದಿಪಡಿಸಿದ ದರದ ಮೇಲೆ ಶೇ. 10 ಹೆಚ್ಚುವರಿ ಹಾಗೂ ಜಿಎಸ್ ಟಿ ವಿಧಿಸಲು ಅನುಮತಿ ನೀಡಿದೆ.

ಆಪ್ ಆಧಾರಿತ ಆಟೋರಿಕ್ಷಾ ಸೇವೆಗಳಿಗೆ ದರ ನಿಗದಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರು ಇಂದು ಮಧ್ಯಂತರ ಆದೇಶ ಹೊರಡಿಸಿದ್ದು, 15 ದಿನಗಳಲ್ಲಿ ದರ ನಿಗದಿಪಡಿಸುವಂತೆ ಮತ್ತು ಓಲಾ, ಉಬರ್‌ ಕಂಪನಿಗಳಿಗೆ ಅನುಕೂಲಕರ ದರವನ್ನು ವಿಧಿಸಬೇಕು ಎಂದು ಹೈಕೋರ್ಟ್‌ ಸರ್ಕಾರಕ್ಕೆ ಸೂಚಿಸಿದೆ.

ಈ ಕಂಪನಿಗಳ ವಿರುದ್ಧ ರಾಜ್ಯ ಸರ್ಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತೆ ಇಲ್ಲ ಮತ್ತು ಕಂಪನಿಗಳ ಪರವಾನಿಗೆ ಕಾಲಾವಕಾಶ ವಿಸ್ತರಿಸುವಂತೆ ಆದೇಶಿಸಿ ಈ ಪ್ರಕರಣದ ವಿಚಾರಣೆಯನ್ನು ನವೆಂಬರ್‌ 7ಕ್ಕೆ ಮುಂದೂಡಿದೆ. 

ಇದಕ್ಕೂ ಮುನ್ನ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ ನಾವಡಗಿ ಅವರು ಗುರುವಾರ ನಡೆದ ಸಭೆಯಲ್ಲಿ ವಿಧಿಸಬೇಕಾದ ದರದ ಕುರಿತು ಯಾವುದೇ ಒಮ್ಮತಕ್ಕೆ ಬರಲಿಲ್ಲ ಮತ್ತು ಸಮಸ್ಯೆಯನ್ನು ಪರಿಹರಿಸಲು ಸರ್ಕಾರಕ್ಕೆ ಗರಿಷ್ಠ 15 ದಿನಗಳ ಕಾಲಾವಕಾಶ ಬೇಕಾಗುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ನಾಳೆಯಿಂದ ಸುಮಾರು ಎರಡು ಕಿ.ಮೀ.ಯವರೆಗಿನ ಆಪ್ ಆಧಾರಿತ ಆಟೋ ಪ್ರಯಾಣಕ್ಕೆ 30 ರೂಪಾಯಿ ದರದ ಜತೆಗೆ, ಶೇಕಡ 10 ರಷ್ಟು ಹೆಚ್ಚುವರಿ ಹಾಗೂ ಜಿಎಸ್‌ಟಿಯೂ ಇರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT