ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸೋದರ ಸಂಬಂಧಿ ಸಾವಿನಿಂದ ಮನನೊಂದು ಮಹಿಳೆ ಆತ್ಮಹತ್ಯೆ

ಸೋದರ ಸಂಬಂಧಿ ಆತ್ಮಹತ್ಯೆಯಿಂದ ಮನನೊಂದಿದ್ದ ಮಹಿಳೆಯೊಬ್ಬರು ತಾವು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಗಡಿ ಮುಖ್ಯರಸ್ತೆಯ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ.

ಬೆಂಗಳೂರು: ಸೋದರ ಸಂಬಂಧಿ ಆತ್ಮಹತ್ಯೆಯಿಂದ ಮನನೊಂದಿದ್ದ ಮಹಿಳೆಯೊಬ್ಬರು ತಾವು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಗಡಿ ಮುಖ್ಯರಸ್ತೆಯ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ.

ಮೃತರನ್ನು ಏಳುಮಲೈ ಅಜಿತ್ (23) ಮತ್ತು ಆತನ ಸೋದರತ್ತೆ ವನಿತಾ (32) ಎಂದು ಗುರುತಿಸಲಾಗಿದೆ. ಅಜಿತ್  ಪೋಷಕರು ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನೆಲೆಸಿದ್ದಾರೆ.

ಅಜಿತ್ ಬಾಲ್ಯದಿಂದಲೂ ವನಿತಾ ಅವರ ಮನೆಯಲ್ಲಿಯೇ ಇದ್ದನು. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಆತ ಭಾನುವಾರ ಮಧ್ಯಾಹ್ನ ನೇಣು ಹಾಕಿಕೊಂಡು ಸಾವನ್ನಪ್ಪಿದ್ದ. ಮರುದಿನ ಬೆಳಗ್ಗೆ ಅಜಿತ್‌ನ ಸಾವಿನಿಂದ ಮನನೊಂದಿದ್ದ ಆಕೆ, ಮನೆಯಲ್ಲಿ ಅಂತ್ಯ ಸಂಸ್ಕಾರದ ವಿಧಿವಿಧಾನಗಳು ನಡೆಯುತ್ತಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ವ್ಯಾಪ್ತಿಯ ಪೊಲೀಸರು ಅಸಹಜ ಸಾವಿನ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT