ವಂದೇ ಭಾರತ್ ಎಕ್ಸ್ ಪ್ರೆಸ್ 
ರಾಜ್ಯ

ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು; ನವೆಂಬರ್ 10ಕ್ಕೆ ಉದ್ಘಾಟನೆ!

ನವೆಂಬರ್ 10ರಂದು ದಕ್ಷಿಣ ಭಾರತದ ಮೊಟ್ಟ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡುತ್ತಿದ್ದು ಈ ರೈಲು ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿದೆ.

ನವದೆಹಲಿ: ನವೆಂಬರ್ 10ರಂದು ದಕ್ಷಿಣ ಭಾರತದ ಮೊಟ್ಟ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡುತ್ತಿದ್ದು ಈ ರೈಲು ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿದೆ.

ದೆಹಲಿ–ಉನಾ ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ಸರಣಿಯ 4ನೇ ರೈಲಿಗೆ ಪ್ರಧಾನಿ ಮೋದಿ ಹಿಮಾಚಲ ಪ್ರದೇಶದಲ್ಲಿ ಚಾಲನೆ ನೀಡಿದ್ದರು. ಇದೀಗ ನಂವೆಂಬರ್ 10ರಂದು ವಂದೇ ಭಾರತ್ ಎಕ್ಸ್‌ಪ್ರೆಸ್‌ ನ 5ನೇ ರೈಲಿಗೆ ಚಾಲನೆ ಸಿಗಲಿದೆ.

ರಾಜ್ಯದ ಮೊದಲ ವಂದೇ ಭಾರತ್ ರೈಲು ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗದಲ್ಲಿ ಸಂಚರಿಸಲಿದೆ. ಇದಕ್ಕೆ ನನ್ನ ಪ್ರೀತಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ರೈಲ್ವೆ, ಸಂವಹನ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಪ್ರತಾಪ್ ಸಿಂಹ ಧನ್ಯವಾದ ಅರ್ಪಿಸಿದ್ದಾರೆ.

ಚೆನ್ನೈನಿಂದ ಮೈಸೂರಿಗೆ ಬೆಂಗಳೂರು ಮಾರ್ಗವಾಗಿ ತೆರಳಲಿರುವ ರೈಲು ನವೆಂಬರ್‌ 5ರಂದು ಟ್ರಯಲ್‌ ರನ್‌ಗಾಗಿ ಇಂಟಿಗ್ರಲ್‌ ಕೋಚ್‌ ಫ್ಯಾಕ್ಟರಿಯಿಂದ ತೆರಳಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನವೇ ರಾಜ್ಯಕ್ಕೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಗಿಫ್ಟ್‌ ಸಿಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಸಂಘರ್ಷ ತೀವ್ರ: Hormuz ಜಲಸಂಧಿ ಬಳಿ ಅಮೆರಿಕ ಭೀಕರ ವೈಮಾನಿಕ ದಾಳಿ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ..!

ಬದಲಾದ ಸಂಸತ್ ಬಲಾಬಲದ ನಡುವೆ ಮುಂಗಾರು ಅಧಿವೇಶನ; ಜು.19 ರಂದು ಸರ್ವಪಕ್ಷಗಳ ಸಭೆ; ಜಿದ್ದಾಜಿದ್ದಿನ ರಾಜಕೀಯಕ್ಕೆ ವೇದಿಕೆ ಸಜ್ಜು..!

2028 ವಿಧಾನಸಭಾ ಚುನಾವಣೆ: BJP ಬಣ ಬಡಿದಾಟದ ಲಾಭ JDSಗೆ?; NDA ಸಿಎಂ ರೇಸ್‌ನಲ್ಲಿ ಕುಮಾರಸ್ವಾಮಿ ಹೆಸರು ಮುನ್ನೆಲೆಗೆ..!

Bangkok pubನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಜೀವ ದಹನ; 63ಕ್ಕೂ ಹೆಚ್ಚು ಮಂದಿಗೆ ಗಾಯ, ವಿದ್ಯುತ್ ದೋಷವೇ ದುರಂತಕ್ಕೆ ಕಾರಣ?

ರಾಹುಲ್ ದ್ರಾವಿಡ್ ಇಂಗ್ಲೆಂಡ್ ಟೆಸ್ಟ್ ತಂಡದ ಮುಂದಿನ ಕೋಚ್ ಆಗ್ತಾರಾ?