ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಜಲಜೀವನ್ ಮಿಷನ್: ನವೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸಿಇಒಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಜಲ ಜೀವನ್ ಮಿಷನ್ ಯೋಜನೆಯಡಿ ಎರಡು ಹಂತಗಳಲ್ಲಿ ಕಾಮಗಾರಿಗಳು ಪ್ರಾರಂಭವಾಗಿದ್ದು, ಬ್ಯಾಚ್ 1ರಡಿ ಶೇ. 88 ರಷ್ಟು ಕಾಮಗಾರಿಗಳು ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳನ್ನು ನವೆಂಬರ್ ಅಂತ್ಯದೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು: ಜಲ ಜೀವನ್ ಮಿಷನ್ ಯೋಜನೆಯಡಿ ಎರಡು ಹಂತಗಳಲ್ಲಿ ಕಾಮಗಾರಿಗಳು ಪ್ರಾರಂಭವಾಗಿದ್ದು, ಬ್ಯಾಚ್ 1ರಡಿ ಶೇ. 88 ರಷ್ಟು ಕಾಮಗಾರಿಗಳು ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳನ್ನು ನವೆಂಬರ್ ಅಂತ್ಯದೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಿಇಒಗಳ ಸಭೆಯಲ್ಲಿ ಮಾತನಾಡಿದ ಅವರು, ಓವರ್ ಹೆಡ್ ಟ್ಯಾಂಕ್ ಗಳ ನಿರ್ಮಾಣಕ್ಕೆ ಕಂದಾಯ ಇಲಾಖೆ ನೆರವಿನೊಂದಿಗೆ ಜಾಗ ಪಡೆದುಕೊಂಡು ಕಾಮಗಾರಿ ಪೂರ್ಣಗೊಳಿಸಬೇಕು. ಬ್ಯಾಚ್-3 ರ ಟಂಡರ್ ಪ್ರಕ್ರಿಯೆ ಶೀಘ್ರವೇ ಪ್ರಾರಂಭಿಸಬೇಕು ಹಾಗೂ ಬ್ಯಾಚ್-4ರ ಡಿ.ಪಿ. ಆರ್ ತಯಾರಿಕೆ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ಜಲಜೀವನ್ ಮಿಷನ್ ಪ್ರಧಾನ ಮಂತ್ರಿಯವರ ಮಹತ್ವಕಾಂಕ್ಷೆಯ ಯೋಜನೆಯಾಗಿದ್ದು, ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಯೋಜನೆಯ ಪ್ರಗತಿಯನ್ನು ನಿಯಮಿತವಾಗಿ ಪ್ರತಿ ತಿಂಗಳು ಪರಿಶೀಲಿಸುವಂತೆ ಸೂಚಿಸಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ 13 ಕೋಟಿ ಮಾನವ ದಿನಗಳ ಗುರಿಯಲ್ಲಿ ಈಗಾಗಲೇ ಶೇ. 88 ರಷ್ಟು ಗುರಿ ಸಾಧನೆಯಾಗಿದೆ. ಶಾಲಾ ಕಟ್ಟಡ, ಚರಂಡಿ ವ್ಯವಸ್ಥೆ ಮತ್ತಿತರ ಕಾಮಗಾರಿಗಳನ್ನು ನರೇಗಾದಡಿ ಕೈಗೆತ್ತಿಕೊಳ್ಳುವಂತೆ  ಹೇಳಿದರು. 

ರಾಜ್ಯದ 5,946 ಪಂಚಾಯಿತಿಗಳ ಪೈಕಿ 5,200 ಪಂಚಾಯಿತಿಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕಗಳು ಕಾರ್ಯಾರಂಭ ಮಾಡಿದೆ. ಉಳಿದ ಪಂಚಾಯಿತಿಗಳಲ್ಲೂ ಶೀಘ್ರವೇ ಪ್ರಾರಂಭಿಸಬೇಕು, ಅಮೃತ ಗ್ರಾಮ ಪಂಚಾಯಿತಿ ಹಂತ-2 ಅಡಿ ಈ ಆರ್ಥಿಕ ವರ್ಷದೊಳಗೆ ಎಲ್ಲಾ ಕಾಮಗಾರಿಗಳು ಪ್ರಾರಂಭವಾಗಬೇಕು, ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ಮಂಜೂರಾದ ಕಾಮಗಾರಿಗಳನ್ನು ಈ ಆರ್ಥಿಕ ವರ್ಷದೊಳಗೆ ಪೂರ್ಣಗೊಳಿಸಬೇಕು ಎಂದರು.

ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ಚರ್ಮಗಂಟು ರೋಗ ನಿವಾರಣೆಯನ್ನು ಪರಿಣಾಮಕಾರಿಯಾಗಿ ಮಾಡಬೇಕು. ಜಿಲ್ಲಾ ಪಂಚಾಯಿತಿಯಲ್ಲಿ 30 ಕೋಟಿ ರೂ.ಗಳಷ್ಟು ಅನುದಾನ ಲಭ್ಯವಿದ್ದು, ಅದರಲ್ಲಿ ಲಸಿಕೆ, ಔಷಧಿ ಹಾಗೂ ಪೌಷ್ಠಿಕ ಆಹಾರದ ವೆಚ್ಚ ಭರಿಸಲು ಸಿಎಂ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT