ನೂತನ ಮುಖ್ಯ ನ್ಯಾಯಮೂರ್ತಿ ಪಿಬಿ ವರಾಳೆ ಅವರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಪಾಲ ಥಾವರಚೆಂದ್ ಗೆಹ್ಲೋಟ್ 
ರಾಜ್ಯ

ಕರ್ನಾಟಕ ಸರ್ವ ಸಮುದಾಯದ ಶಾಂತಿಯ ಓಯಸಿಸ್: ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ

ಕರ್ನಾಟಕ ಶಾಂತಿ ಮತ್ತು ಸಾಂಸ್ಕೃತಿಕ ವೈವಿಧ್ಯತೆಯ ನಾಡು ಎಂದು ಪ್ರತಿಪಾದಿಸಿದ ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರು ನಾಡಗೀತೆಯನ್ನು ಉಲ್ಲೇಖಿಸಿ, ವಿವಿಧ ಧರ್ಮಗಳನ್ನು ಅನುಸರಿಸುವ ಜನರು ಒಟ್ಟಿಗೆ ವಾಸಿಸುವ ಎಲ್ಲಾ ಸಮುದಾಯಗಳಿಗೆ ಈ ಭೂಮಿ ಶಾಂತಿಯ ಓಯಸಿಸ್ ಎಂದಿದ್ದಾರೆ.

ಬೆಂಗಳೂರು: ಕರ್ನಾಟಕ ಶಾಂತಿ ಮತ್ತು ಸಾಂಸ್ಕೃತಿಕ ವೈವಿಧ್ಯತೆಯ ನಾಡು ಎಂದು ಪ್ರತಿಪಾದಿಸಿದ ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರು ನಾಡಗೀತೆಯನ್ನು ಉಲ್ಲೇಖಿಸಿ, ವಿವಿಧ ಧರ್ಮಗಳನ್ನು ಅನುಸರಿಸುವ ಜನರು ಒಟ್ಟಿಗೆ ವಾಸಿಸುವ ಎಲ್ಲಾ ಸಮುದಾಯಗಳಿಗೆ ಈ ಭೂಮಿ ಶಾಂತಿಯ ಓಯಸಿಸ್ ಎಂದಿದ್ದಾರೆ.

ಬೆಂಗಳೂರು, ದೇಶದ ಕ್ರಿಯಾತ್ಮಕ ನಗರಗಳಲ್ಲಿ ಒಂದಾಗಿದೆ ಮತ್ತು ಮಾಹಿತಿ ತಂತ್ರಜ್ಞಾನಕ್ಕೆ ನೀಡಿದ ಕೊಡುಗೆಯಿಂದಾಗಿ ಇದನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ವ್ಯಾಪಕವಾಗಿ ಕರೆಯಲಾಗುತ್ತದೆ. ಇದು ಭಾರತದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಎರಡನೇ ಪ್ರಮುಖ ಮಹಾನಗರ ಎಂದು ಮುಖ್ಯ ನ್ಯಾಯಮೂರ್ತಿ ವರಾಳೆ ಅವರು ಸೋಮವಾರ ಹೈಕೋರ್ಟ್‌ನಲ್ಲಿ ಅವರನ್ನು ಸ್ವಾಗತಿಸಲು ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ (ಕೆಎಸ್‌ಬಿಸಿ) ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು.

ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ಅನೇಕ ಸಾಂಸ್ಕೃತಿಕ ಸಾಮ್ಯತೆಗಳು ಮತ್ತು ಬಲವಾದ ಬಾಂಧವ್ಯವಿದೆ ಎಂದ ಅವರು, 'ಈ ಮಹಾನ್ ಸಂಸ್ಥೆಯೊಂದಿಗೆ (ಕರ್ನಾಟಕ ಹೈಕೋರ್ಟ್) ಸಂಬಂಧ ಹೊಂದಲು ನನಗೆ ಸಂತೋಷವಾಗುತ್ತಿದೆ. ಕರ್ನಾಟಕದ ನ್ಯಾಯಾಂಗವು ನ್ಯಾಯದ ಆಡಳಿತದಲ್ಲಿ ಅಗ್ರಸ್ಥಾನದಲ್ಲಿದೆ ಮತ್ತು ಗಣಕೀಕರಣದಲ್ಲಿ ಮುಂಚೂಣಿಯಲ್ಲಿದೆ ಎಂಬುದು ನನಗೆ ತಿಳಿದಿದೆ. ಅಲ್ಲದೆ, ಇದು ದೇಶದಲ್ಲಿಯೇ ಅತ್ಯುತ್ತಮ ಮೂಲಸೌಕರ್ಯವನ್ನು ಹೊಂದಿದ್ದು, ಲೋಕ ಅದಾಲತ್‌ಗಳಲ್ಲಿ ಪ್ರಕರಣಗಳ ವಿಲೇವಾರಿಯಲ್ಲಿ ನಂಬರ್ 1 ಆಗಿದೆ' ಎಂದು ತಿಳಿಸಿದರು.

ಕರ್ನಾಟಕ ಹೈಕೋರ್ಟ್‌ನಲ್ಲಿ ಅತ್ಯಂತ ದಕ್ಷ ಮತ್ತು ಕಠಿಣವಾಗಿ ಕೆಲಸ ಮಾಡುವ ನ್ಯಾಯಾಧೀಶರು ಮತ್ತು ನ್ಯಾಯಾಂಗದ ಅಧಿಕಾರಿಗಳಿದ್ದಾರೆ. ಬಾರ್ ಕೌನ್ಸಿಲ್ ಸಹಕಾರದೊಂದಿಹೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವವರ ಸಹಕಾರ ಪಡೆಯುತ್ತೇನೆ ಎಂದರು.

ನ್ಯಾಯ ಕೇಳುವವರಿಗೆ ನ್ಯಾಯಾಂಗವೇ ಕೊನೆಯ ಮಾರ್ಗ ಎಂದ ನ್ಯಾಯಮೂರ್ತಿ ವರಾಳೆ, ಬಾರ್‌ ಕೌನ್ಸಿಲ್‌ನ ಸದಸ್ಯರು ಮತ್ತು ನ್ಯಾಯಾಲಯದ ಅಧಿಕಾರಿಗಳು ನ್ಯಾಯದ ಆಡಳಿತದಲ್ಲಿ ಸಹಾಯ ಮಾಡುತ್ತಾರೆ. 'ನ್ಯಾಯಾಂಗ ಮತ್ತು ಬಾರ್ ಕೌನ್ಸಿಲ್ ನ್ಯಾಯದ ರಥದ ಎರಡು ಚಕ್ರಗಳು ಎಂದು ಸರಿಯಾಗಿ ಹೇಳಲಾಗಿದೆ. ಸಮರ್ಥ ಮತ್ತು ದಕ್ಷ ವಕೀಲರ ಸಹಾಯವಿಲ್ಲದೆ, ನ್ಯಾಯಾಧೀಶರು ತಮ್ಮ ಕರ್ತವ್ಯಗಳನ್ನು ನಿರ್ವಹಿಸುವುದು ಕಷ್ಟಸಾಧ್ಯವಾಗುತ್ತದೆ. ನ್ಯಾಯಾಂಗ ವ್ಯವಸ್ಥೆಯ ಮೂಲಭೂತ ಮೌಲ್ಯಗಳಾದ ಕಾರ್ಯವಿಧಾನದ ನ್ಯಾಯಸಮ್ಮತತೆ, ನ್ಯಾಯಾಲಯಗಳಲ್ಲಿ ಸಾರ್ವಜನಿಕ ವಿಶ್ವಾಸ, ದಕ್ಷತೆ, ನ್ಯಾಯದ ಲಭ್ಯತೆ ಮತ್ತು ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ಬಾರ್ ಮತ್ತು ಬೆಂಚ್ ಯಾವಾಗಲೂ ತಿಳಿದಿರಬೇಕು' ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT