ರಾಜ್ಯ

ನ.11ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ: ಕೆಂಪೇಗೌಡರ 108 ಅಡಿ ಪ್ರತಿಮೆ, ಏರ್ ಪೋರ್ಟ್ ನ 2ನೇ ಟರ್ಮಿನಲ್ ಉದ್ಘಾಟನೆ

Sumana Upadhyaya

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಅದು  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಉದ್ಘಾಟಿಸಲು, ಅದರ ಜೊತೆಗೆ ವಿಮಾನ ನಿಲ್ದಾಣದ ಅವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಈ ಬಗ್ಗೆ ನಿನ್ನೆ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಅವರು ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ನ.11ರಂದು ಕೆಂಪೇಗೌಡ ಏರ್​​ಪೋರ್ಟ್ ಮುಂದೆ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ 108 ಅಡಿ ಎತ್ತರದ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ನ.11ರಂದು ಕೆಐಎಬಿ ಮುಂದೆ ಕೆಂಪೇಗೌಡರ ಪ್ರತಿಮೆ ಅನಾವರಣ ಹಿನ್ನೆಲೆ ರಾಜ್ಯಾದ್ಯಂತ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ರಥಗಳು ಸಿದ್ದವಾಗಿದ್ದು, ಅಕ್ಟೋಬರ್​ 21ರಂದು ವಿಧಾನಸೌಧದ ಮುಂಭಾಗ ರಥಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಅಭಿಯಾನ ಯಶಸ್ವಿ ಆಗುವಂತೆ ವಿಧಾನಸೌಧದಲ್ಲಿ ನಿನ್ನೆ ನಡೆದ ಡಿಸಿಗಳ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ. ಅಭಿಯಾನದ ಯಶಸ್ಸಿಗೆ ಎಲ್ಲರೂ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.

SCROLL FOR NEXT