ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕ: ಎರಡು ಅಂತಾರಾಜ್ಯ ಜಲ ಹಂಚಿಕೆ ಸಭೆ; ಗೋದಾವರಿ-ಕಾವೇರಿ ಸಂಪರ್ಕ ಯೋಜನೆ ಜಾರಿಗೆ ಸಹಮತ

ನೀರು ಹಂಚಿಕೆ ಸಂಬಂಧ ರಾಜ್ಯ ಸರ್ಕಾರ ತನ್ನ ಪಾಲುದಾರ ಇತರ ರಾಜ್ಯಗಳ ಜೊತೆಗೆ ಎರಡು ಉನ್ನತ ಮಟ್ಟದ ಸಭೆಗಳನ್ನು ನಡೆಸಿದೆ. ನಾಲ್ಕನೇ ಸಮಾಲೋಚನಾ ಸಭೆಯಲ್ಲಿ ಗೋದಾವರಿ(ಇಂಚಂಪ್ಲಿ)-ಕಾವೇರಿ (ಬೃಹತ್ ಅಣೆಕಟ್ಟು)ಸಂಪರ್ಕ ಯೋಜನೆ ಜಾರಿಗೆ ಸಹಮತಕ್ಕೆ ಬರಲಾಯಿತು.

ಬೆಂಗಳೂರು: ನೀರು ಹಂಚಿಕೆ ಸಂಬಂಧ ರಾಜ್ಯ ಸರ್ಕಾರ ತನ್ನ ಪಾಲುದಾರ ಇತರ ರಾಜ್ಯಗಳ ಜೊತೆಗೆ ಎರಡು ಉನ್ನತ ಮಟ್ಟದ ಸಭೆಗಳನ್ನು ನಡೆಸಿದೆ. ನಾಲ್ಕನೇ ಸಮಾಲೋಚನಾ ಸಭೆಯಲ್ಲಿ ಗೋದಾವರಿ(ಇಂಚಂಪ್ಲಿ)-ಕಾವೇರಿ (ಬೃಹತ್ ಅಣೆಕಟ್ಟು)ಸಂಪರ್ಕ ಯೋಜನೆ ಜಾರಿಗೆ ಸಹಮತಕ್ಕೆ ಬರಲಾಯಿತು.

ರಾಷ್ಟ್ರೀಯ ಜಲ ಅಭಿವೃದ್ಧಿ ಪ್ರಾಧಿಕಾರದ ಮಹಾ ನಿರ್ದೇಶಕ ಭೋಪಾಲ್ ಸಿಂಗ್, ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳು ನಾಡು, ಮಹಾರಾಷ್ಟ್ರ, ಒಡಿಶಾ, ಚತ್ತೀಸ್ ಗಢ ಮತ್ತು ಮಧ್ಯ ಪ್ರದೇಶ ರಾಜ್ಯಗಳ ಅಧಿಕಾರಿಗಳು ಭಾಗವಹಿಸಿದ್ದರು.

141 ಟಿಎಂಸಿ ಅಡಿ ಗೋದಾವರಿ ಹೆಚ್ಚುವರಿ ನೀರನ್ನು ಕೃಷ್ಣಾ, ಕಾವೇರಿ ಮತ್ತು ಪೆನ್ನಾರ್ ಜಲಾನಯನ ಪ್ರದೇಶಗಳಿಗೆ ತಿರುಗಿಸಲು ಉದ್ದೇಶಿಸಿರುವ ಗೋದಾವರಿ-ಕಾವೇರಿ ಜೋಡಣೆ ಯೋಜನೆ ಅನುಷ್ಠಾನಕ್ಕೆ ಒಮ್ಮತಕ್ಕೆ ಬರಲು ಸಭೆ ನಡೆಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತೆಗೆಯಲು ಸಮತೋಲನ ಜಲಾಶಯ ನಿರ್ಮಿಸುವ ಕುರಿತು ಎರಡನೇ ಸಭೆ ನಡೆಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT