ಸಾಂದರ್ಭಿಕ ಚಿತ್ರ 
ರಾಜ್ಯ

ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಹಗರಣ: ಮತ್ತಿಬ್ಬರು ಆರೋಪಿಗಳ ಬಂಧನ

ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ ಮಹದೇವಪ್ಪ ರಕ್ಷಿ (26), ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದ ನಾಗಪ್ಪ ದೊಡ್ಡಮನಿ (27) ಬಂಧಿತ ಆರೋಪಿಗಳಾಗಿದ್ದು ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಆರೋಪಿಗಳು ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿದ್ದು, ಮಲ್ಲಪ್ಪ ರಕ್ಷಿ ಎಲೆಕ್ಟ್ರಾನಿಕ್ ಡಿವೈಸ್‌ಗಳನ್ನು ತೆಗೆದುಕೊಂಡು ಹೋಗಿ ಪರೀಕ್ಷಾ ಅಭ್ಯರ್ಥಿಗಳಿಗೆ ಕೊಟ್ಟಿದ್ದಲ್ಲದೇ, ಉತ್ತರ ಹೇಳಿದ ಆರೋಪವಿದೆ. ಆತನ ಬಳಿಯಿದ್ದ ಒಂದು ಮೊಬೈಲ್, ಕಾರು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನು ನಾಗೇಶ ದೊಡ್ಡಮನಿ ಎಲೆಕ್ಟ್ರಾನಿಕ್ ಡಿವೈಸ್‌ಗಳನ್ನು ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದ ಆರೋಪವಿದೆ. ಈ ನಡುವೆ ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್‌ಪಿನ್ ಸಂಜೀವ ಲಕ್ಷ್ಮಣ ಭಂಡಾರಿ ಸೇರಿದಂತೆ 20 ಆರೋಪಿಗಳಿಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಜೆಎಂಎಫ್‌ಸಿ ಎರಡನೇ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. 

ಈ ನಡುವೆ ಸಂಜೀವ ಭಂಡಾರಿ ಜಾಮೀನು ಪಡೆದು ಕೋರ್ಟ್‌ನಿಂದ ಹೊರಬರುತ್ತಿದ್ದಂತೆಯೇ ಆತನನ್ನು ಇನ್ನೊಂದು ಪ್ರಕರಣದಲ್ಲಿ ಬಂಧಿಸಲಾಗಿದೆ. ಕೆಪಿಟಿಸಿಎಲ್ ಅಕ್ರಮದ ಪ್ರಮುಖ ಆರೋಪಿಯಾಗಿರುವ ಬೆಳಗಾವಿ ಮೂಲದ ಸಂಜೀವ್ ಲಕ್ಷ್ಮಣ ಭಂಡಾರಿ ಜಾಮೀನು ಸಿಕ್ಕು ಹೊರಬರುತ್ತಿದ್ದಂತೆ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅಕ್ರಮದಲ್ಲಿ ಮತ್ತೆ ಅರೆಸ್ಟ್ ಆಗಿದ್ದಾನೆ. ಬೆಳಗಾವಿಯ ಹಿಂಡಲಗಾ ಜೈಲು ಮುಂದೆಯೇ ಸಿಐಡಿ ಅಧಿಕಾರಿಗಳು ಆತನಿಗೆ ಬಲೆ ಹಾಕಿದ್ದಾರೆ. ಈತನ ಮೇಲೆ 2021ರಲ್ಲಿ ನಡೆದಿದ್ದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯಲ್ಲೂ ಅಕ್ರಮ ಎಸಗಿರುವ ಆರೋಪವಿದೆ. 

ಇದೀಗ ಸಂಜೀವ ಭಂಡಾರಿಯನ್ನು ಬೆಳಗಾವಿಯ ಐದನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಲೋಕಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಹೊಂದುವ ಜವಾಬ್ದಾರಿಯುತ ವ್ಯಕ್ತಿ ದೇಶದಲ್ಲಿಲ್ಲದಿರುವುದು ದುರದೃಷ್ಟಕರ'

Thai school shooting: ಶಾಲೆ ಮೇಲೆ ಗುಂಡಿನ ಮಳೆ, 22 ಮಕ್ಕಳು ಸೇರಿ ಕನಿಷ್ಟ 34 ಸಾವು, ದಾಳಿಕೋರ ಪೊಲೀಸ್ ವಶಕ್ಕೆ!

ನರವಾಣೆ ಪುಸ್ತಕ ವಿವಾದ: 'ನಂಬರ್ ಒನ್' ಶಂಕಿತ, ಪೆಂಗ್ವಿನ್ ಪಬ್ಲಿಕೇಷನ್ಸ್‌ಗೆ ನೋಟಿಸ್ ಜಾರಿ ಮಾಡಿದ ದೆಹಲಿ ಪೊಲೀಸರು!

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆ: BWSSB ಮಹತ್ವದ ನಡೆ!

ಬೆಂಗಳೂರಿನಲ್ಲಿ ದಾರುಣ ಘಟನೆ: ಶಾಲಾ ಬಸ್ ಹರಿದು ತಂದೆಯ ಕಣ್ಣೆದುರೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಕಂದಮ್ಮಗಳು!

SCROLL FOR NEXT