ಸಂಗ್ರಹ ಚಿತ್ರ 
ರಾಜ್ಯ

ಚನ್ನರಾಯಪಟ್ಟಣ: ಮಳೆ ನೀರಿನಲ್ಲಿ ಕೊಚ್ಚಿ ಹೋಗಿ 5ನೇ ತರಗತಿ ವಿದ್ಯಾರ್ಥಿನಿ ಸಾವು

ರಾಜ್ಯದಲ್ಲಿ ಮಳೆ ದುರಂತಗಳು ಮುಂದುವರೆದಿದ್ದು, ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಚನ್ನರಾಯಪಟ್ಟಣದಲ್ಲಿ 5ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಕೊಚ್ಚಿ ಹೋಗಿದ್ದಾರೆ.

ಹಾಸನ: ರಾಜ್ಯದಲ್ಲಿ ಮಳೆ ದುರಂತಗಳು ಮುಂದುವರೆದಿದ್ದು, ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಚನ್ನರಾಯಪಟ್ಟಣದಲ್ಲಿ 5ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಕೊಚ್ಚಿ ಹೋಗಿದ್ದಾರೆ.

5ನೇ ತರಗತಿ ಓದುತ್ತಿರುವ ರಾಜಬೋವಿ ಎಂಬುವರ ಪುತ್ರಿ ರಂಜಿತಾ (11) ಗುರುವಾರ ಬೆಳಗ್ಗೆ ಚನ್ನರಾಯಪಟ್ಟಣ ತಾಲೂಕಿನ ದಡ್ಡಿಹಳ್ಳಿ ಟ್ಯಾಂಕ್ ಬಳಿ ಶಾಲೆಗೆ ಹೋಗುತ್ತಿದ್ದ ವೇಳೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾಳೆ ಎಂದು ತಿಳಿದುಬಂದಿದೆ.

ರಂಜಿತಾ

ಆಕೆ ತನ್ನ ಚಿಕ್ಕಪ್ಪನ ಬೈಕ್ ನಲ್ಲಿ ಶಾಲೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಭಾರೀ ಮಳೆಯಿಂದ ತುಂಬಿ ಹರಿಯುತ್ತಿದ್ದ ಸೇತುವೆಯನ್ನು ದಾಟುವಾಗ ಬೈಕ್ ಸವಾರನ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ. ಘಟನೆಯಲ್ಲಿ ಆಕೆಯ ಚಿಕ್ಕಪ್ಪ ಪವಾಡ ಸದೃಶವಾಗಿ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಗುರುವಾರ ಬೆಳಗ್ಗೆ ಪ್ರವಾಹದಿಂದಾಗಿ ದಡ್ಡಿಹಳ್ಳಿ ಟ್ಯಾಂಕ್‌ ಒಡೆದು ಪ್ರವಾಹ ಏರ್ಪಟ್ಟಿತ್ತು. ಹೀಗಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿದ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿದ್ದು, ಬಾಲಕಿಯ ದೇಹವನ್ನು ಹೊರತೆಗೆದು ಪೋಷಕರಿಗೆ ಒಪ್ಪಿಸಲಾಗಿದೆ. ಚನ್ನರಾಯಪಟ್ಟಣ ತಾಲೂಕು ಕಳೆದ ಎರಡು ದಶಕಗಳಲ್ಲೇ ಅತಿ ಹೆಚ್ಚು ಮಳೆಯಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!