ಅಲೋಕ್ ಕುಮಾರ್ 
ರಾಜ್ಯ

ದುಷ್ಕೃತ್ಯಕ್ಕೆ ಸಂಚು: ಮಂಗಳೂರಿನಲ್ಲಿ ನಿಷೇಧಿತ ಪಿಎಫ್ಐಗೆ ಸೇರಿದ ಐವರ ಬಂಧನ!

ಪಿಎಫ್​ಐ ಸಂಘಟನೆ ನಿಷೇಧದ ಬಳಿಕವೂ ದುಷ್ಕರ್ಮಿಗಳು ವಿಧ್ವಂಸಕಕ್ಕೆ ಸಂಚು ರೂಪಿಸುವುದನ್ನು ಮುಂದುವರಿಸಿದ್ದಾರೆ. ದುಷ್ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಪಿಎಫ್​ಐಗೆ ಸೇರಿದ ಐವರನ್ನು ಇಂದು ಮಂಗಳೂರಿನಲ್ಲಿ ಬಂಧಿಸಲಾಗಿದೆ. 

ಮಂಗಳೂರು: ಪಿಎಫ್​ಐ ಸಂಘಟನೆ ನಿಷೇಧದ ಬಳಿಕವೂ ದುಷ್ಕರ್ಮಿಗಳು ವಿಧ್ವಂಸಕಕ್ಕೆ ಸಂಚು ರೂಪಿಸುವುದನ್ನು ಮುಂದುವರಿಸಿದ್ದಾರೆ. ದುಷ್ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಪಿಎಫ್​ಐಗೆ ಸೇರಿದ ಐವರನ್ನು ಇಂದು ಮಂಗಳೂರಿನಲ್ಲಿ ಬಂಧಿಸಲಾಗಿದೆ. 

ಈ ಬಗ್ಗೆ ಮಾತನಾಡಿದ, ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್, ನಿಷೇಧಿತ ಪಿಎಫ್ಐಗೆ ಸೇರಿದ ಐವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದರು. ವಿಚಾರಣೆ ವೇಳೆ ಆರೋಪಿಗಳು ಯಾರ ಜೊತೆ ಸಂಪರ್ಕ ಇಟ್ಟುಕೊಂಡಿದ್ದರು. ಯಾವ ರೀತಿ ಸಂಚು ರೂಪಿಸಿದ್ದರು ಎಂಬ ವಿಚಾರಗಳ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದರು.

ತನಿಖೆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಶಾಂತಿಯೂತ ಪ್ರತಿಭಟನೆ ಮಾಡಿದರೆ ನಮ್ಮ ಕಡೆಯಿಂದ ಯಾವುದೇ ಅಡ್ಡಿ ಇರುವುದಿಲ್ಲ. ಕಾನೂನು ಮೀರಿ ಯಾರಾದರು ಪ್ರತಿಭಟನೆ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಪಿಎಫ್​ಐ ಸಂಘಟನೆ ನಿಷೇಧವಾಗಿದ್ದರೂ ಅದರ ಕಾರ್ಯಕರ್ತರ ಮೇಲೆ ನಾವು ಕಣ್ಣು ಇಟ್ಟಿದ್ದೇವೆ. ಕರಾವಳಿ ಭಾಗವಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು, ದಾವಣಗೆರೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ನಮ್ಮ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಎಲ್ಲಾ ವಿಚಾರಗಳನ್ನು ತನಿಖಾಧಿಕಾರಿಗಳು ಕಲೆ ಹಾಕುತ್ತಿದ್ದಾರೆ ಎಂದರು.

ಪುತ್ತೂರು ಬಿಟ್ಟು ಮತ್ತೆಲ್ಲಿ ತರಬೇತಿ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಅಲೋಕ್ ಕುಮಾರ್ ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT