ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ಭಯೋತ್ಪಾದನೆ ದಮನಕ್ಕೆ ಪೊಲೀಸರಿಗೆ ಎಚ್ಚರಿಕೆ ಅತ್ಯಗತ್ಯ: ಮುಖ್ಯಮಂತ್ರಿ ಬೊಮ್ಮಾಯಿ

ಭಯೋತ್ಪಾದನೆ ದಮನಕ್ಕೆ ಸಾಮಾನ್ಯ ಪೇದೆಯೂ ಕೂಡಾ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಭಯೋತ್ಪಾದನೆ ದಮನಕ್ಕೆ ಸಾಮಾನ್ಯ ಪೇದೆಯೂ ಕೂಡಾ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಿಸಿ ಮಾತನಾಡಿದ ಅವರು, ಕರ್ನಾಟಕ ಪೊಲೀಸ್ ಇಲಾಖೆಗೆ ದೊಡ್ಡ ಇತಿಹಾಸ ಇದೆ. ದೇಶ ಹಾಗೂ ವಿದೇಶಿ ದುಷ್ಟ ಶಕ್ತಿಗಳು ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿವೆ. ಆದರೆ, ಇಂತಹ ಅಪರಾಧಗಳ ಸಾಧ್ಯತೆಗಳನ್ನು ಗ್ರಹಿಸಿ ಕಾನೂನನ್ನು ಮುಂಚಿತವಾಗಿಯೇ ರೂಪಿಸುವ ಅಗತ್ಯವಿದೆ ಎಂದರು. 

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ನಿರ್ವಹಣೆಯಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ. ಪೊಲೀಸರಿಗೆ ಸೌಲಭ್ಯ ನೀಡುವ ವಿಚಾರದಲ್ಲಿ ನಮ್ಮ ಸರ್ಕಾರ ಬೇರೆ ರಾಜ್ಯಗಳಿಗಿಂತ ಮುಂಚೂಣಿಯಲ್ಲಿದೆ. ಪ್ರತಿ ವರ್ಷ ನಾಲ್ಕೈದು ಸಾವಿರ ಪೊಲೀಸರ ನೇಮಕ ಮಾಡಿಕೊಳ್ಳಲಾಗುತ್ತಿದೆ. ತರಬೇತಿಯಲ್ಲಿ ಹೊಸ ತಂತ್ರಜ್ಞಾನದ ಪರಿಚಯ, ಸೈಬರ್ ಅಪರಾಧಗಳ ಕುರಿತು ಅರಿವು ಮೂಡಿಸಬೇಕಾಗಿದೆ. ಇನ್ಸ್ ಪೆಕ್ಟರ್, ಡಿವೈಸ್ಪಿ ವರ್ಗಗಳ ಅಧಿಕಾರಿಗಳಿಗೆ ತರಬೇತಿ ಅಗತ್ಯವಿದೆ. ಅದಕ್ಕೆ ಪ್ರತ್ಯೇಕ ತರಬೇತಿ ಕಮಾಂಡ್ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ಪೊಲೀಸರ ತ್ಯಾಗ, ಬಲಿದಾನ ಹಾಗೂ ಸಾಧನೆಗಳನ್ನು ಜನರಿಗೆ ತಿಳಿಸಲು ಪೊಲೀಸ್ ವಸ್ತು ಸಂಗ್ರಹಾಲಯ, ಎಟಿಎಸ್ ಬಲವರ್ಧನೆ, ಜೈಲುಗಳ ಸಂಖ್ಯೆ ಹಾಗೂ ಸಾಮರ್ಥ್ಯ ಹೆಚ್ಚಿಸಲಾಗುವುದಲ್ಲದೇ, ಇನ್ನಷ್ಟು ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT