ಸಂಗ್ರಹ ಚಿತ್ರ 
ರಾಜ್ಯ

300 ಅಧಿಕಾರಿಗಳ ನೇಮಕ ಮಾಡಲು ಕೃಷಿ ಕೇಡರ್ ನಿಯಮಗಳಿಗೆ ತಿದ್ದುಪಡಿ: ಸಂಪುಟ ಸಭೆ ಅನುಮೋದನೆ

ಸಹಾಯಕ ಕೃಷಿ ಅಧಿಕಾರಿಗಳ ನೇಮಕಕ್ಕೆ ಕೇಡರ್ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಗುರುವಾರ ಅಂಗೀಕರಿಸಿದ್ದು, ಶೀಘ್ರದಲ್ಲಿಯೇ 300 ಅಧಿಕಾರಿಗಳ ನೇಮಕಾತಿಗೆ ಮುಂದಾಗಲು ಸರ್ಕಾರ ಯೋಜಿಸಿದೆ. 

ಬೆಂಗಳೂರು: ಸಹಾಯಕ ಕೃಷಿ ಅಧಿಕಾರಿಗಳ ನೇಮಕಕ್ಕೆ ಕೇಡರ್ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಗುರುವಾರ ಅಂಗೀಕರಿಸಿದ್ದು, ಶೀಘ್ರದಲ್ಲಿಯೇ 300 ಅಧಿಕಾರಿಗಳ ನೇಮಕಾತಿಗೆ ಮುಂದಾಗಲು ಸರ್ಕಾರ ಯೋಜಿಸಿದೆ. 

ಪ್ರಸ್ತುತ ಇಲಾಖೆಯಲ್ಲಿ 1,801 ಕೃಷಿ ಅಧಿಕಾರಿಗಳು ಮತ್ತು 2,099 ಸಹಾಯಕ ಕೃಷಿ ಅಧಿಕಾರಿಗಳ ಮಂಜೂರಾದ ಸಾಮರ್ಥ್ಯವಿದ್ದು, ಹಿಂದಿನ ನಿಯಮಗಳ ಪ್ರಕಾರ, ಬಿಎಸ್ಸಿ ಕೃಷಿ ಪದವೀಧರರು ಮಾತ್ರ ನೇಮಕಾತಿಗೆ ಅರ್ಹರಾಗಿದ್ದರು. ಆದರೆ ಈಗ ತಂದಿರುವ ತಿದ್ದುಪಡಿಯೊಂದಿಗೆ ಬಿಎಸ್ಸಿ ಅಗ್ರಿಕಲ್ಚರ್ ಮಾರ್ಕೆಟಿಂಗ್ ಮತ್ತು ಸಹಕಾರ, ಬಿಎಸ್ಸಿ ಆನರ್ಸ್ ಅಗ್ರಿಕಲ್ಚರ್ ಬಿಸಿನೆಸ್ ಮ್ಯಾನೇಜ್ಮೆಂಟ್, ಬಿಎಸ್ಸಿ ಆನರ್ಸ್ ಅಗ್ರಿಕಲ್ಚರ್ ಬಿಸಿನೆಸ್ ಮ್ಯಾನೇಜ್ಮೆಂಟ್, ಬಿಎಸ್ಸಿ ಅಗ್ರಿಕಲ್ಚರ್ ಬಯೋಟೆಕ್ನಾಲಜಿ, ಬಿಎಸ್ಸಿ ಅಗ್ರಿಕಲ್ಚರ್ ಇಂಜಿನಿಯರಿಂಗ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಶೇಕಡಾ 15 ರಷ್ಟು ಉದ್ಯೋಗಗಳಿಗೆ ಅರ್ಹರಾಗಿರುತ್ತಾರೆ. 85 ರಷ್ಟು ಬಿಎಸ್ಸಿ ಕೃಷಿ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಲಾಗುತ್ತದೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದರು.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ಈ ಪ್ರಸ್ತಾವನೆಯನ್ನು ಸಾರ್ವಜನಿಕರ ಮುಂದೆ ಇಟ್ಟು ಪ್ರತಿಕ್ರಿಯೆ ಆಹ್ವಾನಿಸಲಾಗುವುದು ಎಂದು ಇಲಾಖೆ ಮೂಲಗಳು ತಿಳಿಸಿವೆ. ಪ್ರಸ್ತುತ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆಯು 300 ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಯೋಜಿಸಿರುವ ಹಿನ್ನೆಲೆಯಲ್ಲಿ ಸಿ & ಆರ್ ನಿಯಮ ತಿದ್ದುಪಡಿ ಮಾಡಲಾಗಿದೆ. ನಿಯಮಗಳ ಬದಲಾವಣೆ ಎಂದರೆ ಅನರ್ಹರಾಗಿರುವ ಪದವೀಧರರು ಸ್ಪರ್ಧಿಸಲು ಅರ್ಹರಾಗುತ್ತಾರೆ ಎಂದು ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭೆಯಲ್ಲಿ 'ವಂದೇ ಮಾತರಂ' ಚರ್ಚೆ: ದೇಶಕ್ಕೆ ಸ್ವಾತಂತ್ರ್ಯ ಬಂದ 79 ವರ್ಷಗಳ ನಂತರ ಚರ್ಚೆಯ ಅಗತ್ಯವೇನಿತ್ತು? ಪ್ರಿಯಾಂಕಾ ಗಾಂಧಿ, ಯಾದವ್ ತೀವ್ರ ಕಿಡಿ!

'ಇತಿಹಾಸ ತಿರುಚಲು' ಪ್ರಧಾನಿ ಮೋದಿ ಯತ್ನ; ನೆಹರೂ ಪರಂಪರೆ ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ: ಗೌರವ್ ಗೊಗೊಯ್

ಇಂದು 500 Indigo ವಿಮಾನ ಹಾರಾಟ ರದ್ದು: ನಾವು ಹಗುರವಾಗಿ ಪರಿಗಣಿಸಲ್ಲ... ಇಂಡಿಗೋ ಬಿಕ್ಕಟ್ಟಿನ ಬಗ್ಗೆ ಕೇಂದ್ರ ಸಚಿವರ ಎಚ್ಚರಿಕೆ!

ಮಹಾರಾಷ್ಟ್ರ: ಫಡ್ನವೀಸ್ ಜೊತೆ ಆಪ್ತರಾಗಿರುವ ಮಹಾಯುತಿ ಮಿತ್ರಪಕ್ಷದ 22 ಶಾಸಕರು ಪಕ್ಷ ತೊರೆಯಲು ಸಜ್ಜು- ಆದಿತ್ಯ ಠಾಕ್ರೆ!

WB ಖರೀದಿಗೆ Netflix ಡೀಲ್ ಬಗ್ಗೆ ಟ್ರಂಪ್ ಅಪಸ್ವರ; ಸರ್ಕಾರದಿಂದ ಅನುಮೋದನೆಗೆ ಕೊಕ್ಕೆ ಸೂಚನೆ: ಏಕೆಂದರೆ...

SCROLL FOR NEXT