ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದ ಪೊಲೀಸ್ ಪೇದೆಗೆ ಜೀವಾವಧಿ ಶಿಕ್ಷೆ!

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪೊಲೀಸ್ ಪೇದೆಯೊಬ್ಬರಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪೊಲೀಸ್ ಪೇದೆಯೊಬ್ಬರಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರವೀಣ್ ಸಾಲ್ಯಾನ್ (35) ಶಿಕ್ಷೆಗೊಳಗಾದ ಪೊಲೀಸ್ ಪೇದೆಯಾಗಿದ್ದಾರೆ. ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಪ್ರವೀಣ್ ಅವರಿಗೆ ರೂ.10,000 ರೂಪಾಯಿ ದಂಡ ವಿಧಿಸಿ, ಜೀವಾವಧಿ ಶಿಕ್ಷೆ ನೀಡಿದ್ದಾರೆ. 

ಬಜಪೆ ಸಿದ್ಧಾರ್ಥ ನಗರ ನಿವಾಸಿ ಪ್ರವೀಣ್‌ ಸಾಲ್ಯಾನ್‌ 2015ರ ಫೆ. 16ರಂದು ಅಪ್ರಾಪ್ತ ವಯಸ್ಕ ಬಾಲಕಿಯನ್ನು ಫೇಸ್‌ಬುಕ್‌ನಲ್ಲಿ ಪರಿಚಯ ಮಾಡಿಕೊಂಡಿದ್ದ. ಅನಂತರ ತಾನು ಪ್ರೀತಿಸುತ್ತಿರುವುದಾಗಿ ನಾಟಕವಾಡಿದ ಆತ ನಿರಂತರ ಮೊಬೈಲ್‌ ಮತ್ತು ಸಾಮಾಜಿಕ ಜಾಲತಾಣ ಮೂಲಕ ಆಕೆಯನ್ನು ಸಂಪರ್ಕಿಸುತ್ತಿದ್ದ. ತನ್ನ ಗುಪ್ತಾಂಗದ ಚಿತ್ರಗಳನ್ನು ಆಕೆಗೆ ಕಳುಹಿಸಿ, ಅಶ್ಲೀಲ ಸಂಭಾಷಣೆಯನ್ನೂ ನಡೆಸುತ್ತಿದ್ದ. ಬಳಿಕ ಅಕೆಯಲ್ಲಿ ಒಂದು ಲಕ್ಷ ರೂ. ಹಣ ಅಥವಾ ಚಿನ್ನ ನೀಡಬೇಕು ಎಂದು ಬೇಡಿಕೆಯಿಟ್ಟು ಬೆದರಿಸಿದ್ದ. ಇದರಿಂದ ಆತಂಕಗೊಂಡ ಆಕೆ 2015ರ ಜೂ. 10ರಂದು ಬೆಳಗ್ಗೆ 5ರಿಂದ 6.15ರ ನಡುವೆ ತನ್ನ ಮನೆಯ ಬೆಡ್‌ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮಗ್ರ ವಿಚಾರಣೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ, ಎಫ್‌ಟಿಎಸ್‌ಸಿ-1 (ಪೋಕ್ಸೋ) ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಪ್ರಕರಣದ ಕುರಿತಾಗಿ ವಿಚಾರಣೆ ನಡೆಸಿ ಅಪರಾಧಿಗೆ ಐಪಿಸಿ 305ರಡಿ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ಹಾಗೂ ಸೆಕ್ಷನ್‌ 12ರಡಿ (ಪೋಕ್ಸೋ) 3 ವರ್ಷ ಕಠಿಣ ಸಜೆ ಹಾಗೂ 1 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದ ಮಂಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಿತ್ರ..., My Friend... ಎನ್ನುತ್ತಲೇ ಭಾರತದ ಬೆನ್ನಿಗೆ ಚೂರಿ!; US ಸೇನೆ ಜೊತೆ ನಂಟು ಹೊಂದಿದ್ದ ವ್ಯಕ್ತಿ ಈಶಾನ್ಯ ರಾಜ್ಯದಲ್ಲಿ; ದೇಶದ ವಿರುದ್ಧ ಸಂಚು!

ರಾಜ್ಯಾದ್ಯಂತ ಮಳೆ ಆರ್ಭಟ: ಬೆಂಗಳೂರು ಹೈರಾಣ, ಇನ್ನೂ 3 ದಿನ ಮಳೆ ಸಾಧ್ಯತೆ!

'ಭಾರತ ಆಪ್ತ ಸ್ನೆಹಿತ', 'ಪಾಕಿಸ್ತಾನಕ್ಕೆ ತುಂಬಾ ಕೆಟ್ಟದಾಗಿರುತ್ತದೆ': ಆಫ್ಘನ್ ಕ್ರಿಕೆಟಿಗ Allah Ghazanfar ಎಚ್ಚರಿಕೆ

ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

'ಅಶ್ಲೀಲ ಅಲ್ಲ, ಹಾಡನ್ನು Rewrite ಮಾಡ್ತೇನೆ': ನಿರ್ದೇಶಕ Prem ಕ್ಷಮೆಯಾಚನೆ! ನಟಿ ನೋರಾ, ಸಾಹಿತಿ ಅಲಂ ಬಗ್ಗೆಯೂ ಕಿಡಿ! Video

SCROLL FOR NEXT