ಸಂಗ್ರಹ ಚಿತ್ರ 
ರಾಜ್ಯ

ಆದಾಯ ಮೀರಿ ಆಸ್ತಿ ಗಳಿಕೆ: ಮೈಸೂರು, ಕೊಡಗಿನಲ್ಲಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ!

ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳು ಸೇರಿದಂತೆ ಒಟ್ಟು 7 ಸ್ಥಳಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರು: ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳು ಸೇರಿದಂತೆ ಒಟ್ಟು 7 ಸ್ಥಳಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. 

ಡಿಎಸ್‌ಪಿಗಳಾದ ಕೃಷ್ಣಯ್ಯ ಮಾಲ್ತೀಶ್, ಪವನ್ ಕುಮಾರ್, ಎಸ್​ಟಿ ಒಡೆಯರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಮಡಿಕೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪಿಡಬ್ಲ್ಯುಡಿ ಇಲಾಖೆ ಇಇ ಡಿ.ನಾಗರಾಜು ಅವರಿಗೆ ಸೇರಿದ ಮೈಸೂರಿನ ಕೆ‌ಸಿ ಬಡಾವಣೆ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.  ದಾಳಿ ವೇಳೆ ಅಧಿಕಾರಿಗಳು ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.

ಇದೇ ವೇಳೆ ನೀರಾವರಿ ಇಲಾಖೆಯ ಜ್ಯೂನಿಯರ್ ಇಂಜಿನಿಯರ್ ರಫೀಕ್ ರ ಕುಶಾಲನಗರದಲ್ಲಿರುವ​ ಮನೆಗೂ ಅಧಿಕಾರಿಗಳು ತೆರಳಿ ದಾಖಲೆಗಳ ಪರಿಶೀಲನೆ ನಡೆಸಿದೆ. ಮತ್ತೊಂದು ತಂಡ ಮಾದಾಪಟ್ಟಣದಲ್ಲಿರುವ ಪೊಲೀಸ್ ಇನ್​ಸ್ಪೆಕ್ಟರ್ ಎಂ.ಮಹೇಶ್ ಅವರಿಗೆ ಸೇರಿದ ಮನೆಯ ಮೇಲೂ ದಾಳಿ ನಡೆಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಗೀತೆ ಪಠಿಸಿದ ಡಿ.ಕೆ ಶಿವಕುಮಾರ್: ನಮಗೆ ಹೈಕಮಾಂಡ್ ಇದೆ, ನಾನು ಪ್ರತಿಕ್ರಿಯಿಸುವುದಿಲ್ಲ; ಜಿ ಪರಮೇಶ್ವರ

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT