ಕಾಂಪೌಂಡ್ ಕುಸಿತಕ್ಕೆ ವಾಹನ ಜಖಂಗೊಂಡಿರುವುದು. 
ರಾಜ್ಯ

ಭಾರೀ ಮಳೆ: ಕಾಂಪೌಂಡ್ ಕುಸಿತಕ್ಕೆ ವಾಹನಗಳು ಜಖಂ, ಪರಿಹಾರ ಭರವಸೆ ನೀಡಿದ 'ನಮ್ಮ ಮೆಟ್ರೋ'

ಭಾರೀ ಮಳೆಗೆ ಸಂಪಿಗೆ ರಸ್ತೆಯ ಮೆಟ್ರೊ ನಿಲ್ದಾಣದ ಬಳಿ ಕಾಂಪೌಂಡ್ ಕುಸಿದು ವಾಹನಗಳು ಜಖಂಗೊಂಡ ಹಿನ್ನೆಲೆಯಲ್ಲಿ, ಹಾನಿಗೊಳಗಾದ ವಾಹನಗಳ ಮಾಲೀಕರಿಗೆ ಪರಿಹಾರ ನೀಡುವುದಾಗಿ ನಮ್ಮ ಮೆಟ್ರೋ ಹೇಳಿದೆ.

ಬೆಂಗಳೂರು: ಭಾರೀ ಮಳೆಗೆ ಸಂಪಿಗೆ ರಸ್ತೆಯ ಮೆಟ್ರೊ ನಿಲ್ದಾಣದ ಬಳಿ ಕಾಂಪೌಂಡ್ ಕುಸಿದು ವಾಹನಗಳು ಜಖಂಗೊಂಡ ಹಿನ್ನೆಲೆಯಲ್ಲಿ, ಹಾನಿಗೊಳಗಾದ ವಾಹನಗಳ ಮಾಲೀಕರಿಗೆ ಪರಿಹಾರ ನೀಡುವುದಾಗಿ ನಮ್ಮ ಮೆಟ್ರೋ ಹೇಳಿದೆ. 

ವಾಹನಗಳು ಜಖಂಗೊಂಡ ಪರಿಣಾಮ ವಾಹನ ಮಾಲೀಕರು ಪರಿಹಾರ ನೀಡಿದ ನಂತರವೇ ವಾಹನಗಳ ತೆರವುಗೊಳಿಸುವುದಾಗಿ ಆಗ್ರಹಿಸಿದ್ದರು.

ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಮೆಟ್ರೋ ಎಂಡಿ ಅಂಜುಂ ಪರ್ವೇಜ್ ಅವರು, ವಾಹನಗಳ ಮಾಲೀಕರಿಗೆ ಪರಿಹಾರ ನೀಡುವ ಭರವಸೆ ನೀಡಿದರು. 

ಬಹಳ ಹಿಂದೆಯೇ ಗೋಡೆಯನ್ನು ನಿರ್ಮಾಣ ಮಾಡಲಾಗಿತ್ತು. ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಬಿದ್ದಿದೆ. ಹಾನಿಗೊಳಗಾಗಿರುವ ಎಲ್ಲಾ ವಾಹನಗಳಿಗೂ ಪರಿಹಾನ ನೀಡಲಾಗುತ್ತದೆ ಎಂದು ಹೇಳಿದರು. 

ಅಲ್ಲದೆ, ಒಂದು ತಿಂಗಳಲ್ಲಿ ಕಾಂಕ್ರಿಟ್ ನಿಂದ ಕಾಂಪೌಂಡ್ ನಿರ್ಮಾಣ ಮಾಡುವ ಭರವಸೆಯನ್ನು ನೀಡಿದರು. ಅತಿಯಾದ ಮಳೆ ಮತ್ತು ಭೂಮಿ ಸಡಿಲಿಕೆಯಿಂದ ಕಾಂಪೌಂಡ್ ಕುಸಿದಿದೆ. ಒಂದು ತಿಂಗಳಿನಲ್ಲಿ ಕಾಂಪೌಂಡ್ ಮರು ನಿರ್ಮಾಣ ಮಾಡಲಾಗುತ್ತದೆ ಎಂದು ಪರ್ವೇಜ್ ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT