ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ರಸ್ತೆಗಳು ಗುಂಡಿಮಯ: ತನ್ನ ಇಂಜಿನಿಯರ್ ಗಳಿಗೆ ಪಾಠ ಹೇಳಲು ಬಿಬಿಎಂಪಿ ಮುಂದು

ನಗರದ ರಸ್ತೆಗಳು ಗುಂಡಿಮಯಗೊಂಡಿದ್ದು, ಅಧಿಕಾರಿಗಳ ಅಸಮರ್ಥತೆಗೆ ಸಾರ್ವಜನಿಕ ವಲಯದಿಂದ ಭಾರೀ ಅಸಮಾಧಾನಗಳು ವ್ಯಕ್ತವಾಗತೊಡಗಿವೆ. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ಎಂಜಿನಿಯರ್‌ಗಳಿಗೆ ರಸ್ತೆ ಮೂಲಸೌಕರ್ಯದೊಂದಿಗೆ ಗುಂಡಿಗಳನ್ನು ಹೇಗೆ ಮುಚ್ಚುವುದು ಎಂಬುದರ ಕುರಿತು ತರಬೇತಿ ನೀಡಲು ಮುಂದಾಗಿದೆ.

ಬೆಂಗಳೂರು: ನಗರದ ರಸ್ತೆಗಳು ಗುಂಡಿಮಯಗೊಂಡಿದ್ದು, ಅಧಿಕಾರಿಗಳ ಅಸಮರ್ಥತೆಗೆ ಸಾರ್ವಜನಿಕ ವಲಯದಿಂದ ಭಾರೀ ಅಸಮಾಧಾನಗಳು ವ್ಯಕ್ತವಾಗತೊಡಗಿವೆ. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ಎಂಜಿನಿಯರ್‌ಗಳಿಗೆ ರಸ್ತೆ ಮೂಲಸೌಕರ್ಯದೊಂದಿಗೆ ಗುಂಡಿಗಳನ್ನು ಹೇಗೆ ಮುಚ್ಚುವುದು ಎಂಬುದರ ಕುರಿತು ತರಬೇತಿ ನೀಡಲು ಮುಂದಾಗಿದೆ. 

ಈ ಕುರಿತು ಮಾತನಾಡಿದ ಬಿಬಿಎಂಪಿ ಇಂಜಿನಿಯರ್‌ ಇನ್‌ ಚೀಫ್‌ ಬಿಎಸ್‌ ಪ್ರಹ್ಲಾದ್‌ ಅವರು, ಅಕ್ಟೋಬರ್‌ 31ರಂದು ಟೌನ್‌ ಹಾಲ್‌ ಮತ್ತು ತಾಂತ್ರಿಕ ಸಲಹಾ ಸಮಿತಿಯಲ್ಲಿ ವಿಚಾರ ಸಂಕಿರಣ ನಡೆಯಲಿದ್ದು, ನಿವೃತ್ತ ಎಂಜಿನಿಯರ್‌ಗಳಾದ ಪ್ರೊ.ಜಯ ಗೋಪಾಲ್‌, ಜಗದೀಶ್‌ ಮತ್ತಿತರ ತಜ್ಞರು ರಸ್ತೆ ಗುಂಡಿಗಳನ್ನು ತುಂಬಲು ಬಿಬಿಎಂಪಿ ಎಂಜಿನಿಯರ್‌ಗಳಿಗೆ ತರಬೇತಿ ನೀಡಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಪಾಲಿಕೆಯು ರಸ್ತೆಗುಂಡಿಗಳನ್ನು ಸರಿಪಡಿಸಲು ವಾರ್ಷಿಕ 30 ಕೋಟಿ ರೂಪಾಯಿಗಳನ್ನು ವ್ಯಯಿಸುತ್ತಿದ್ದು, ಬಿಬಿಎಂಪಿ ಎಂಜಿನಿಯರ್‌ಗಳಿಗೆ ತರಬೇತಿ ನೀಡಲು ಖಾಸಗಿ ಏಜೆನ್ಸಿಗಳನ್ನು ತೊಡಗಿಸಿಕೊಂಡಿದೆ ಎಂಬ ಮಾತುಗಳು ಕೇಳಿ ಬಂದಿತ್ತು. 

ಇದಕ್ಕೆ ಸ್ಪಷ್ಟನೆ ನೀಡಿರುವ ಪ್ರಹ್ಲಾದ್ ಅವರು, ರಸ್ತೆ ಗುಂಡಿ ತುಂಬಲು ಖಾಸಗಿಯವರಿಗೆ ಪಾಲಿಕೆ ಅವಕಾಶ ನೀಡುವುದಿಲ್ಲ. ಯಾವುದೇ ಖಾಸಗಿ ಸಂಸ್ಥೆಗೂ ಹಣ ಮಂಜೂರು ಮಾಡುವುದಿಲ್ಲ. ದಿನವಿಡೀ ವಿಚಾರ ಸಂಕಿರಣ ನಡೆಯಲಿದ್ದು, ಸಮಸ್ಯೆಯನ್ನು ಹೇಗೆ ಪರಿಹರಿಸುವುದು ಮತ್ತು ಹೆಚ್ಚು ಕಾಲ ಉಳಿಯುವ ರೀತಿಯಲ್ಲಿ ಗುಂಡಿಗಳನ್ನು ಹೇಗೆ ಸರಿಪಡಿಸುವುದು ಎಂಬುದರ ಮೇಲೆ ಬೆಳಕು ಚೆಲ್ಲಲಿದೆ ಎಂದರು. 

ಇತ್ತೀಚೆಗೆ ‘ಫಿಕ್ಸ್ ಮೈ ಸ್ಟ್ರೀಟ್ ಅಪ್ಲಿಕೇಶನ್’ ಅಡಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 27,000 ಕ್ಕೂ ಹೆಚ್ಚು ಗುಂಡಿಗಳು ಕಂಡುಬಂದಿದ್ದು, ಅದರಲ್ಲಿ 14,000 ಗುಂಡಿಗಳನ್ನು ಮುಚ್ಚಲಾಗಿದೆ. 4,000 ದೂರುಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸದ ಕಾರಣ ನಿರ್ಲಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

SCROLL FOR NEXT