ಸಾಂದರ್ಭಿಕ ಚಿತ್ರ 
ರಾಜ್ಯ

ಸ್ತ್ರೀರೋಗ ತಜ್ಞೆ ಪದ್ಮಿನಿ ಪ್ರಸಾದ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ; ದಾವಣಗೆರೆ ಯುವಕನ ಬಂಧನ

ಕರ್ನಾಟಕದ ಪ್ರಖ್ಯಾತ ಸ್ತ್ರೀರೋಗ ತಜ್ಞೆ ಡಾ.ಪದ್ಮಿನಿ ಪ್ರಸಾದ್ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಮಹಿಳೆಯರಿಗೆ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕರ್ನಾಟಕದ ಪ್ರಖ್ಯಾತ ಸ್ತ್ರೀರೋಗ ತಜ್ಞೆ ಡಾ.ಪದ್ಮಿನಿ ಪ್ರಸಾದ್ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಮಹಿಳೆಯರಿಗೆ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ಮೂಲದ ಜಗದೀಶ್ (32) ಎಂಬಾತನನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಲ ಮಹಿಳೆಯರು ನೀಡಿದ್ದ ಮಾಹಿತಿ ಆಧರಿಸಿ ಡಾ.ಪದ್ಮಿನಿ ಪ್ರಸಾದ್ ಅವರು ಠಾಣೆಗೆ ದೂರು ನೀಡಿದ್ದರು.

'ಅಪರಿಚಿತರು ನಕಲಿ ಪೇಸ್‌ಬುಕ್‌ ಖಾತೆಗಳನ್ನು ತೆರೆದು ಮಹಿಳೆಯರೊಂದಿಗೆ ಅಸಭ್ಯವಾದ ಶಬ್ಧಗಳನ್ನು ಬಳಸಿದ ಸಂದೇಶಗಳನ್ನು ಮತ್ತು ಅಶ್ಲೀಲ ಚಿತ್ರಗಳನ್ನು ಕಳುಹಿಸುತ್ತಾ ಮಹಿಳೆಯರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದವು. ಪ್ರಖ್ಯಾತ ವೈದ್ಯರ ಹೆಸರಿಗೆ ಕಳಂಕ ಬರುವ ರೀತಿಯಲ್ಲಿ ನಕಲಿ ಫೇಸ್‌ಬುಕ್‌ ಖಾತೆಯಲ್ಲಿ ಸಂದೇಶ ಕಳುಹಿಸುತ್ತಿದ್ದರು, ನಕಲಿ ಫೇಸ್‌ಬುಕ್‌ ಖಾತೆಗಳನ್ನು ಹೊಂದಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಡಾ.ಪದ್ಮಿನಿ ಪ್ರಸಾದ್ ಅವರು, ಉತ್ತರ ವಿಭಾಗದ ಸಿ.ಇ.ಎನ್‌ ಕ್ರೈಂ ಹೊಲೀಸ್‌ ಠಾಣೆಯಲ್ಲಿ ಐಟಿ ಆಕ್ಟ್‌ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ದೂರು ಸ್ವೀಕರಿಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ. ಅಂತೆಯೇ ಆರೋಪಿಯಿಂದ ಕೃತ್ಯಕ್ಕೆ ಬಳಸಿದ ಮೊಬೈಲ್‌ ಫೋನ್‌ ಅನ್ನೂ ವಶಪಡಿಸಿಕೊಳ್ಳಲಾಗಿದೆ. ಇನ್ನು ಕೆಲವು ನಕಲಿ ಖಾತೆಗಳನ್ನು ತೆರೆದ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಸಾರ್ವಜನಿಕರು ತಮ್ಮ ವೈಯಕ್ತಿಕ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಾಗ ಎಚ್ಚರಿಕೆ ವಹಿಸುವುದು ಸೂಕ್ತ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT