ಸಮಾವೇಶದಲ್ಲಿ ಮಾತನಾಡುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್. 
ರಾಜ್ಯ

2ಎ ಮೀಸಲಾತಿಗೆ ಆಗ್ರಹ: ಡಿ.12ಕ್ಕೆ ವಿಧಾನಸೌಧದ ಮುಂದೆ ಪ್ರತಿಭಟನೆಗೆ ಪಂಚಮಸಾಲಿಗಳು ನಿರ್ಧಾರ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಡಿ.12ರಂದು ವಿಧಾನಸೌಧದ ಎದುರು 25 ಲಕ್ಷ ಜನರಿಂದ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಹುಕ್ಕೇರಿಯಲ್ಲಿ ಶುಕ್ರವಾರ ನಡೆದ ಪಂಚಮಸಾಲಿಗಳ ಬೃಹತ್‌ ಸಮಾವೇಶದಲ್ಲಿ ತೀರ್ಮಾನಿಸಲಾಯಿತು.

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಡಿ.12ರಂದು ವಿಧಾನಸೌಧದ ಎದುರು 25 ಲಕ್ಷ ಜನರಿಂದ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಹುಕ್ಕೇರಿಯಲ್ಲಿ ಶುಕ್ರವಾರ ನಡೆದ ಪಂಚಮಸಾಲಿಗಳ ಬೃಹತ್‌ ಸಮಾವೇಶದಲ್ಲಿ ತೀರ್ಮಾನಿಸಲಾಯಿತು. 

ಸಭೆಯನ್ನುದ್ದೇಶಿಸಿ ಮಾತನಾಡಿದ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮಿ, ಪಂಚಮಸಾಲಿಗಳಿಗೆ ಮೀಸಲಾತಿಗಾಗಿ ನಡೆಯುತ್ತಿರುವ ಚಳವಳಿ ಶೀಘ್ರದಲ್ಲೇ ತಾರ್ಕಿಕ ಅಂತ್ಯವನ್ನು ತಲುಪಲಿದೆ ಎಂದು ಘೋಷಿಸಿದರು.

ಪಂಚಮಸಾಲಿ ಸಮುದಾಯವು ಲಿಂಗಾಯತ ಜನಸಂಖ್ಯೆಯ ಶೇಕಡಾ 82 ರಷ್ಟು ಬಹುಮತವನ್ನು ಹೊಂದಿದೆ. ಆದರೂ ಅಧಿಕಾರ ಪಡೆಯುವ ಅವಕಾಶಗಳಿಂದ ವಂಚಿತವಾಗಿದೆ. ಅದಕ್ಕೆ ಕಾರಣ ಸಮುದಾಯದ ಜನರು ಸಹೃದಯರಾಗಿರುವುದು ಎಂದು ಹೇಳಿದರು.

ತಾವು ಕೂಡಲಸಂಗಮದ ಪೀಠಾಧ್ಯಕ್ಷರಾದಾಗಿನಿಂದ ಇಲ್ಲಿಯವರೆಗೆ ಯಾವುದಕ್ಕೂ ಬೇಡಿಕೆ ಇಟ್ಟಿಲ್ಲ, ಆದರೆ ಈಗ ಪಂಚಮಸಾಲಿಗಳಿಗೆ ಹೋರಾಟಕ್ಕೆ ಕರೆ ನೀಡುವುದಾಗಿ ತಿಳಿಸಿದರು.

ಸರ್ಕಾರವು ಎಸ್‌ಸಿ/ಎಸ್‌ಟಿಗಳಿಗೆ ಸಮಾನವಾಗಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗುವ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ನಿರ್ಧಾರ ಕೈಗೊಳ್ಳಬೇಕು. ಬಿಜೆಪಿಯು ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಆಡಳಿತ ನಡೆಸುತ್ತಿದೆ, ಹೀಗಾಗಿ ಪಕ್ಷಕ್ಕೆ ಮೀಸಲಾತಿಯನ್ನು ಘೋಷಿಸಲು ಸುಲಭವಾಗುತ್ತದೆ ಎಂದರು. 

ಧಾರವಾಡ ಶಾಸಕ ಅರವಿಂದ ಬೆಲ್ಲದ್ ಅವರು ಸಮುದಾಯಕ್ಕೆ ಮೀಸಲಾತಿ ಪಡೆಯುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸರ್ಕಾರದ ಮೇಲೆ ಒತ್ತಡ ಹೇರಿ ಸಹಾಯ ಮಾಡಬೇಕೆಂದು ಆಗ್ರಹಿಸಿದರು. ಸಮಾವೇಶದಲ್ಲಿ ಹಲವು ಮುಖಂಡರು ಪಕ್ಷಾತೀತವಾಗಿ ಪಾಲ್ಗೊಂಡಿದ್ದರು. ಸಮಾವೇಶದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರೂ ಮಾತನಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT