ಕೆಂಪೇಗೌಡ ಪ್ರತಿಮೆಗೆ ಶುಕ್ರವಾರ ನಡೆದ ಪವಿತ್ರ ಮಣ್ಣು ಸಂಗ್ರಹ ಅಭಿಯಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಗಣ್ಯರು ಹಾಜರಿದ್ದರು. 
ರಾಜ್ಯ

ಕೆಂಪೇಗೌಡ ಪ್ರತಿಮೆ ರಾಜ್ಯವನ್ನು ಮತ್ತಷ್ಟು ಎತ್ತರಕ್ಕೆ ಏರಿಸಲಿದೆ: ಸಿಎಂ ಬೊಮ್ಮಾಯಿ

‘ಸಮೃದ್ಧಿಯ ಪ್ರತಿಮೆ’ ಎಂದು ಬಿಂಬಿತವಾಗಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಯು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಸ್ಫೂರ್ತಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ‘ಸಮೃದ್ಧಿಯ ಪ್ರತಿಮೆ’ ಎಂದು ಬಿಂಬಿತವಾಗಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಯು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಸ್ಫೂರ್ತಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಬರುವ ನ.11 ರಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣದ ಜತೆಗೆ ಕೆಂಪಂಗೌಡರ ಥೀಮ್ ಪಾರ್ಕ್'ಗೆ ಬಳಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಪವಿತ್ರ ಮೃತ್ತಿಕಾ (ಮಣ್ಣು) ಸಂಗ್ರಹಣಾ ಅಭಿಯಾನಕ್ಕೆ ಸಿಎಂ ಬೊಮ್ಮಾಯಿಯವರು ಹಸಿರು ನಿಶಾನೆ ನೀಡಿದರು. 

ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಅಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಮತ್ತಿತರ ಗಣ್ಯರು ವಿಧಾನಸೌಧದ ಆವರಣದಲ್ಲಿರುವ ಎಲ್ಲಾ ಪ್ರತಿಮೆಗಳ ಸ್ಥಳದಿಂದ ಸಂಗ್ರಹಿಸಿದ ಮಣ್ಣು ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಕೆಂಪೇಗೌಡರು ಮಹಾನ್ ದಾರ್ಶನಿಕರಾಗಿದ್ದರು. ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು 108 ಅಡಿ ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದು. 

ಬೆಂಗಳೂರು ನಗರಕ್ಕೆ ಬುನಾದಿ ಹಾಕಿದವರು ಕೆಂಪೇಗೌಡರು, ಸಾಮಾಜಿಕ ನ್ಯಾಯಕ್ಕೆ ಪ್ರಾಧಾನ್ಯತೆ ನೀಡಿದರು. 'ಸಮೃದ್ಧಿಯ ಪ್ರತಿಮೆ' ಎಂದು ಸೂಕ್ತವಾಗಿ ಹೆಸರಿಸಲಾಗಿದೆ ಮತ್ತು ಬೆಂಗಳೂರು ನಗರವು ಅತ್ಯಂತ ಎತ್ತರಕ್ಕೆ ಬೆಳೆಯಬೇಕು ಎಂಬ ಸರ್ಕಾರದ ಆಶಯವನ್ನು ಇದು ಸಂಕೇತಿಸುತ್ತದೆ ಎಂದು ಹೇಳಿದರು.

ಐಟಿ/ಬಿಟಿ ಹಾಗೂ ಉನ್ನತ ಶಿಕ್ಷಣ ಸಚಿವ ಹಾಗೂ ಕೆಂಪೇಗೌಡ ಪಾರಂಪರಿಕ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮಾತನಾಡಿ, ಕೆಂಪೇಗೌಡ ಥೀಮ್ ಪಾರ್ಕ್ ಅಭಿವೃದ್ಧಿಗೆ ರಾಜ್ಯಾದ್ಯಂತ ಮಣ್ಣನ್ನು ಬಳಸುತ್ತಿರುವುದು ರಾಜ್ಯದ ಏಕತೆಯನ್ನು ಸಂಕೇತಿಸುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT