ರಾಜ್ಯ

ರಾಯಚೂರು: ಹೃದಯಾಘಾತದಿಂದ ರಾಜಹಂಸ ಬಸ್ ಚಾಲಕ ಸಾವು; ಅದೃಷ್ಟವಶಾತ್ ಪ್ರಯಾಣಿಕರು ಪಾರು, 14 ಜನರಿಗೆ ಗಾಯ!   

Vishwanath S

ರಾಯಚೂರು: ರಾಯಚೂರಿನಿಂದ ಬೆಳಗಾವಿಗೆ ಹೊರಟಿದ್ದ ರಾಜಹಂಸ ಬಸ್ ಚಾಲಕನಿಗೆ ಮಾರ್ಗಮಧ್ಯೆ ಹೃದಯಾಘಾತವಾಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 

ಲಿಂಗಸೂಗೂರಿನ ಚಿಕ್ಕಹೆಸರೂರು ಗ್ರಾಮದ ಬಳಿ ಈ ಘಟನೆ ನಡೆದಿದ್ದು ಬಸ್ ಚಾಲಕ ಶ್ರೀನಿವಾಸ್ ಎಂಬುವರು ಹೃದಯಾಘಾತವಾಗಿದೆ. ಹೀಗಾಗಿ ಬಸ್ ರಸ್ತೆ ಬದಿ ಪಲ್ಟಿಯಾಗಿದ್ದು ಬಸ್ ನಲ್ಲಿದ್ದ 14 ಮಂದಿಗೆ ಗಾಯಗಳಾಗಿವೆ.

ಬಸ್ಸಲ್ಲಿದ್ದ ಪ್ರಯಾಣಿಕರ ಪೈಕಿ 14 ಜನ ಗಾಯಗೊಂಡಿದ್ದು ಅವರನ್ನು ಲಿಂಗಸೂಗೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. 

SCROLL FOR NEXT