ಆರ್. ಅಶೋಕ್ 
ರಾಜ್ಯ

ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ: ಧರಣಿ ಕೈ ಬಿಟ್ಟ ಪ್ರಸನ್ನಾನಂದಪುರಿ ಸ್ವಾಮೀಜಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯದ ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್ ಅಂಕಿತ ಹಾಕಿದ ಬೆನ್ನಲ್ಲೇ ಪ್ರಸನ್ನಾನಂದಪುರಿ ಶ್ರೀ ಅವರು ತಮ್ಮ ಧರಣಿ ಅಂತ್ಯಗೊಳಿಸಿದ್ದಾರೆ.

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ಧಪಡಿಸಿರುವ 'ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು ಸುಗ್ರೀವಾಜ್ಞೆ- 2022 ಕ್ಕೆ ರಾಜ್ಯದ ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್ ಅಂಕಿತ ಹಾಕಿದ ಬೆನ್ನಲ್ಲೇ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಅಹೋರಾತ್ರ ಧರಣಿ ನಡೆಸ್ತಿದ್ದ ಪ್ರಸನ್ನಾನಂದಪುರಿ ಶ್ರೀ ಅವರು ತಮ್ಮ ಹೋರಾಟವನ್ನು ಅಂತ್ಯಗೊಳಿಸಿದ್ದಾರೆ.  

ಕಳೆದ 257 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಶ್ರೀಗಳಿಂದ ಅಹೋರಾತ್ರಿ ಧರಣಿ ನಡೆಯುತ್ತಿತ್ತು. ಸರ್ಕಾರದಿಂದ ಸುಗ್ರೀವಾಜ್ಞೆ ಪ್ರಕಟ ಹಿನ್ನೆಲೆಯಲ್ಲಿ ಧರಣಿ ಕೈಬಿಟ್ಟಿರುವ ಪ್ರಸನ್ನಾನಂದಪುರಿ ಶ್ರೀಗಳು ಇನ್ನರೆಡು ದಿನಗಳಲ್ಲಿ ನಮ್ಮ ಬೇಡಿಕೆಗೆ ಸಹಕರಿಸಿದ ಸಿಎಂ ಬೊಮ್ಮಾಯಿ‌ ಹಾಗೂ ಅವರ ಸಂಪುಟ ಸದಸ್ಯರಿಗೆ ಹಾಗೂ ವಿಪಕ್ಷ ನಾಯಕರನ್ನು ಕರೆಸಿ  ಅಭಿನಂದನೆ ಸಲ್ಲಿಸಲಾಗುವುದು ಎಂದು ಹೇಳಿದರು. ಅಲ್ಲದೆ, ಧರಣಿಗೆ ಪೂರ್ಣ ವಿರಾಮ ಹೇಳುವುದಾಗಿ ಘೋಷಿಸಿದರು.

ಸಚಿವ ಆರ್.ಅಶೋಕ್ ಅವರು ಮಾತನಾಡಿ, “ರಾಜ್ಯಪಾಲರು ಮಧ್ಯಪ್ರದೇಶದಲ್ಲಿದ್ದರೂ, ನಾವು ಅವರ ಒಪ್ಪಿಗೆಯನ್ನು ಪಡೆದುಕೊಂಡಿದ್ದೇವೆ ಮತ್ತು ಇದನ್ನು ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ದೀಪಾವಳಿ ಉಡುಗೊರೆಯಾಗಿ ನೀಡಿದ್ದೇವೆ. ಬೊಮ್ಮಾಯಿ ಬಿಟ್ಟರೆ ಬೇರೆ ಯಾವ ನಾಯಕರೂ ಜೇನುಗೂಡು ಹೊಡೆಯುವ ರಿಸ್ಕ್ ತೆಗೆದುಕೊಳ್ಳುತ್ತಿರಲಿಲ್ಲ. ಸ್ವಾಮೀಜಿಗಳು ಒತ್ತಾಯ ಮಾಡುತ್ತಿದ್ದಂತೆಯೇ ಸೂರ್ಯಗ್ರಹಣಕ್ಕೂ ಮುನ್ನವೇ ಮೀಸಲಾತಿ ಒದಗಿಸಿದ್ದೇವೆಂದು ಹೇಳಿದರು. 

ಸ್ವಾಮೀಜಿಗಳು ಇಲ್ಲೇ ಕಾಯಂ ಹೋರಾಟ ಮಾಡಬೇಕು ಎಂದು ಬಹಳಷ್ಟು ಜನ (ವಿಪಕ್ಷಗಳು) ಬಯಸಿದ್ದರು. ಅವರ ಉದ್ದೇಶ ಮೀಸಲಾತಿ ಪ್ರಮಾಣ ಹೆಚ್ಚಿಸಬಾರದು ಮತ್ತು ಸರ್ಕಾರ ಇಕ್ಕಟ್ಟಿಗೆ ಸಿಲುಕಬೇಕು ಎಂಬುದೇ ಆಗಿತ್ತು. ಆದರೆ, ನಮ್ಮ ಮುಖ್ಯಮಂತ್ರಿ ಚಾಣಕ್ಯರು, ಯಾವ ಸಮಯದಲ್ಲಿ ಏನು ಮಾಡಬೇಕು. ಕಲ್ಲು ಹೊಡೆದರೆ ಮಾವಿನಕಾಯಿ ಬೀಳಬೇಕು ಎಂಬುದು ಅವರಿಗೆ ಗೊತ್ತು’. ಇದೀಗ ಪ್ರತಿಭಟನೆ ಕೈಬಿಟ್ಟು, ದೀಪಾವಳಿಯನ್ನು ಆಚರಿಸಿ. ಇದು ದೀಪಾವಳಿಯ ಉಡುಗೊರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT