ಕಿರಣ್ ಮಜುಂದಾರ್ ಶಾ 
ರಾಜ್ಯ

ಪತಿಯ ಅಗಲಿಕೆಯಿಂದ ತುಂಬಲಾರದ ನಷ್ಟ: ಕಿರಣ್ ಮಜುಂದಾರ್ ಶಾ

ತನ್ನ ಪತಿಯ ನಿಧನದಿಂದ ತುಂಬಲಾರದ ನಷ್ಟವಾಗಿರುವುದಾಗಿ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ತಿಳಿಸಿದ್ದಾರೆ.

ಬೆಂಗಳೂರು: ತನ್ನ ಪತಿಯ ನಿಧನದಿಂದ ತುಂಬಲಾರದ ನಷ್ಟವಾಗಿರುವುದಾಗಿ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ತಿಳಿಸಿದ್ದಾರೆ. ಬಯೋಕಾನ್ ಸಂಸ್ಥೆಯ ಉಪಾಧ್ಯಕ್ಷ ಹಾಗೂ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಜಾನ್ ಷಾ, ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೋಮವಾರ ನಿಧನರಾದರು.

' ನನ್ನ ಪತಿ, ಮಾರ್ಗದರ್ಶಕ ಹಾಗೂ ಆತ್ಮ ಸಂಗಾತಿ ಕಳೆದುಕೊಂಡು ತುಂಬಾ ಹಾನಿಯಾಗಿದೆ. ನನ್ನ ಉದ್ದೇಶ ಸಾಧಿಸುವಲ್ಲಿ ಯಾವಾಗಲೂ ಆಧ್ಯಾತ್ಮಿಕ ಮಾರ್ಗದರ್ಶಕರಾಗಿದ್ದರು. ಜಾನ್ ಅವರ ಆತ್ಮಕ್ಕೆ ಶಾಂತಿ  ಸಿಗಲಿ,  ನಾನು ನಿನ್ನನ್ನು ಗಾಢವಾಗಿ ಮಿಸ್ ಮಾಡಿಕೊಳ್ಳುತ್ತೇನೆ ಎಂದು ಮಜುಂದಾರ್-ಶಾ ಹೇಳಿದ್ದಾರೆ.

ಸ್ಕಾಟ್ಸ್‌ಮನ್ ಜಾನ್ ಶಾ,  1999 ರಲ್ಲಿ ಬಯೋಕಾನ್‌ಗೆ ಸೇರುವ ಮೊದಲು ಪ್ರಮುಖ ಜವಳಿ ಕಂಪನಿ ಮಧುರಾ ಕೋಟ್ಸ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಚಿಕ್ಕದಾಗಿ ಪ್ರಾರಂಭವಾದ ಬಯೋಕಾನ್ ಸಂಸ್ಥೆ ಜಾಗತಿಕವಾಗಿ ಮನ್ನಣೆ ಪಡೆಯುವಲ್ಲಿ ಜಾನ್ ಶಾ ಅವರ ಪಾತ್ರ ಮಹತ್ವದ್ದಾಗಿತ್ತು ಎಂದು ಕಂಪನಿ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT