ಸಿಎಂ ಬೊಮ್ಮಾಯಿ 
ರಾಜ್ಯ

ಶೀಘ್ರದಲ್ಲೇ ಕಿತ್ತೂರಿನಲ್ಲಿ 1000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್‌ಶಿಪ್ ಸ್ಥಾಪನೆ: ಸಿಎಂ ಬೊಮ್ಮಾಯಿ

ಕಿತ್ತೂರು ಬಳಿ ಕೆಐಎಡಿಬಿ ಜಾಗದಲ್ಲಿ 1,000 ಎಕರೆ ಕೈಗಾರಿಕಾ ಟೌನ್‌ಶಿಪ್‌ ನಿರ್ಮಿಸಲು ನಿರ್ಧರಿಸಲಾಗಿದ್ದು, ಶೀಘ್ರ ಈ ನಿಟ್ಟಿನಲ್ಲಿ ಕೆಲಸ ಆರಂಭಿಸಿ 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದರು.

ಕಿತ್ತೂರು (ಬೆಳಗಾವಿ): ಕಿತ್ತೂರು ಬಳಿ ಕೆಐಎಡಿಬಿ ಜಾಗದಲ್ಲಿ 1,000 ಎಕರೆ ಕೈಗಾರಿಕಾ ಟೌನ್‌ಶಿಪ್‌ ನಿರ್ಮಿಸಲು ನಿರ್ಧರಿಸಲಾಗಿದ್ದು, ಶೀಘ್ರ ಈ ನಿಟ್ಟಿನಲ್ಲಿ ಕೆಲಸ ಆರಂಭಿಸಿ 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದರು. 

ಬ್ರಿಟಿಷರ ವಿರುದ್ಧ ಕಿತ್ತೂರಿನ ರಾಣಿ ಚೆನ್ನಮ್ಮ ಅವರು ನಡೆಸಿದ ಹೋರಾಟದ ನೆನಪಿಗಾಗಿ ಪ್ರತಿ ವರ್ಷ ಆಚರಿಸುವ ಕಿತ್ತೂರೋತ್ಸವವನ್ನು ಉದ್ಘಾಟಿಸಿ ಮಾತನಾಡಿದ, ಧಾರವಾಡ-ಬೆಳಗಾವಿ ರೈಲು ಮಾರ್ಗವನ್ನು ಕಿತ್ತೂರು ಮಾರ್ಗವಾಗಿ ನಿರ್ಮಿಸಲಾಗುವುದು. ಇದಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಹೇಳಿದರು.

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತಕ್ಕೆ ಸಂಬಂಧಿಸಿ ಇನ್ನು ಕೆಲವೇ ದಿನಗಳಲ್ಲಿ ಸಿಹಿ ಸುದ್ದಿ ಸಿಗಲಿದೆ. ಅಲ್ಲದೆ ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧವಿದೆ. ಅದರ ಅನುಷ್ಠಾನಕ್ಕೂ ಶೀಘ್ರ ಕಾಲ ಕೂಡಿ ಬರಲಿದೆ ಎಂದು ತಿಳಿಸಿದರು.

ಚನ್ನಮ್ಮನ ಉತ್ಸವಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ ಎಂಬುದು ಹಿಂದಿನ ನಂಬಿಕೆ. ಇದಕ್ಕೆ ಸಡ್ಡು ಹೊಡೆದು ಮುಖ್ಯಮಂತ್ರಿಯಾಗಿ 2 ಬಾರಿ ಉತ್ಸವಕ್ಕೆ ಬಂದಿದ್ದೇನೆ ಎಂದರು. 

ಕಿತ್ತೂರು ಉತ್ಸವಕ್ಕೆ ಬಂದರೆ ಅಧಿಕಾರ ಹೋಗುತ್ತೇ ಎಂಬ ಮೌಢ್ಯ ಎಲ್ಲ ಮುಖ್ಯಮಂತ್ರಿಗಳಲ್ಲಿದೆ. ಎಸ್‌.ಬಂಗಾರಪ್ಪ ಸಿಎಂ ಆಗಿದ್ದಾಗ ಕಿತ್ತೂರು ಉತ್ಸವ ಆಚರಣೆಗೆ ಚಾಲನೆ ನೀಡಿದ್ದರು. ಅವರು ಸಿಎಂ ಆಗಿ ಕಿತ್ತೂರಿಗೆ ಬಂದ ಹೋದ ಕೆಲವೇ ದಿನಗಳಲ್ಲಿ ಅಧಿಕಾರ ಹೋಗಿತ್ತು. ಆ ಬಳಿಕ ಕಿತ್ತೂರು ಉತ್ಸವಕ್ಕೆ ಬಂದರೆ ಮುಖ್ಯಮಂತ್ರಿ ಗಾದಿ ಹೋಗುತ್ತದೆ ಎಂದು ಬಿಂಬಿಸಲಾಯಿತು. ಅಂದಿನಿಂದ ಹಲವು ಮುಖ್ಯಮಂತ್ರಿಗಳು ಕಿತ್ತೂರು ಉತ್ಸವಕ್ಕೆ ಬರಲೇ ಇಲ್ಲ. 

ಕಳೆದ ವರ್ಷ ನನಗೂ ಕಿತ್ತೂರು ಉತ್ಸವಕ್ಕೆ ಹೋಗಬೇಡಿ ಎಂದು ಕೆಲವರು ಸಲಹೆ ನೀಡಿದ್ದರು. ಇಲ್ಲಿಗೆ ಬಂದರೆ ಅಧಿಕಾರ ಹೋಗುತ್ತೆ ಎಂಬುದು ಮೂಢನಂಬಿಕೆ ಅಷ್ಟೆ. ಚಾಮರಾಜನಗರಕ್ಕೆ ಹೋದ್ರೂ ಅಧಿಕಾರ ಹೋಗುತ್ತದೆ ಎಂದು ಹೇಳುತ್ತಾರೆ. ಕಿತ್ತೂರು ಹಾಗೂ ಚಾಮರಾಜ ನಗರ ಎರಡೂ ಕಡೆ ಮುಖ್ಯಮಂತ್ರಿಯಾಗಿ ನಾನು ಹೋಗಿ ಬಂದಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT