ಸಂಗ್ರಹ ಚಿತ್ರ 
ರಾಜ್ಯ

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕ ದಾರುಣ ಸಾವು

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ.

ಬೆಳಗಾವಿ: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ.

ಹತ್ತರಗಿ ಗ್ರಾಮದ ವರ್ಧನ್ ಈರಣ್ಣ ಬ್ಯಾಳಿ(6) ಮೃತ ಬಾಲಕ. ಬೈಕ್ ನಲ್ಲಿ ತಂದೆ ಜೊತೆ ತೆರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ.

ಹಬ್ಬಕ್ಕೆ ಹೊಸಬಟ್ಟೆ ಖರೀದಿಸಲು ತಂದೆ ಜೊತೆ ಬಂದಿದ್ದ ಬಾಲಕ ಹಳೆ ಗಾಂಧಿ ನಗರದ ಬ್ರಿಡ್ಜ್ ಮೇಲೆ ಬೈಕ್ ನಲ್ಲಿ ಮುಂದೆ ಕುಳಿತು ತೆರಳುತ್ತಿದ್ದಾಗ ಮಾಂಜಾ ದಾರ ಕುತ್ತಿಗೆಗೆ ತಗುಲಿ ಕುತ್ತಿಗೆ ಕೊಯ್ದುಕೊಂಡಿದೆ. ಈ ವೇಳೆ ಬಾಲಕ ಗಂಭೀರ ಗಾಯಗೊಂಡಿದ್ದಾನೆ. ಆರಂಭದಲ್ಲಿ ತಂದೆಗೆ ಏನಾಯಿತು ಅರ್ಥವಾಗಿಲ್ಲ. ಸ್ಥಳದಲ್ಲಿದ್ದವರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ. ಚಿಕಿತ್ಸೆ ನೀಡಲು ಮುಂದಾದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. 

ಪ್ರಕರಣ ಸಂಬಂಧ ಮಾಳ ಮಾರುತಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT