ಬೆಳಗಾವಿ: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ.
ಹತ್ತರಗಿ ಗ್ರಾಮದ ವರ್ಧನ್ ಈರಣ್ಣ ಬ್ಯಾಳಿ(6) ಮೃತ ಬಾಲಕ. ಬೈಕ್ ನಲ್ಲಿ ತಂದೆ ಜೊತೆ ತೆರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ.
ಹಬ್ಬಕ್ಕೆ ಹೊಸಬಟ್ಟೆ ಖರೀದಿಸಲು ತಂದೆ ಜೊತೆ ಬಂದಿದ್ದ ಬಾಲಕ ಹಳೆ ಗಾಂಧಿ ನಗರದ ಬ್ರಿಡ್ಜ್ ಮೇಲೆ ಬೈಕ್ ನಲ್ಲಿ ಮುಂದೆ ಕುಳಿತು ತೆರಳುತ್ತಿದ್ದಾಗ ಮಾಂಜಾ ದಾರ ಕುತ್ತಿಗೆಗೆ ತಗುಲಿ ಕುತ್ತಿಗೆ ಕೊಯ್ದುಕೊಂಡಿದೆ. ಈ ವೇಳೆ ಬಾಲಕ ಗಂಭೀರ ಗಾಯಗೊಂಡಿದ್ದಾನೆ. ಆರಂಭದಲ್ಲಿ ತಂದೆಗೆ ಏನಾಯಿತು ಅರ್ಥವಾಗಿಲ್ಲ. ಸ್ಥಳದಲ್ಲಿದ್ದವರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ. ಚಿಕಿತ್ಸೆ ನೀಡಲು ಮುಂದಾದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಮಾಳ ಮಾರುತಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.