ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಓಮಿಕ್ರಾನ್ ರೂಪಾಂತರಿ ಬಿಕ್ಯು.1 ಭೀತಿ: ಲಕ್ಷಣ ಇರುವವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಸಲಹೆ

ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್'ನ ಓಮಿಕ್ರಾನ್ ತಳಿಯ ಹೊಸ ರೂಪಾಂತರಿ ಬಿಕ್ಯೂ.1 ಪತ್ತೆಯಾಗಿದ್ದು, ಇದೀಗ ರಾಜ್ಯದಲ್ಲೂ ಆತಂಕ ಹೆಚ್ಚಾಗತೊಡಗಿದೆ. ಈ ಹಿನ್ನೆಲೆಯಲ್ಲಿ ಶೀತ, ಕೆಮ್ಮು ಪರೀಕ್ಷೆ ಮಾಡಿಸಿಕೊಂಡು ಐಸೋಲೇಷನ್ ನಲ್ಲಿರುವಂತೆ ರಾಜ್ಯ ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್'ನ ಓಮಿಕ್ರಾನ್ ತಳಿಯ ಹೊಸ ರೂಪಾಂತರಿ ಬಿಕ್ಯೂ.1 ಪತ್ತೆಯಾಗಿದ್ದು, ಇದೀಗ ರಾಜ್ಯದಲ್ಲೂ ಆತಂಕ ಹೆಚ್ಚಾಗತೊಡಗಿದೆ. ಈ ಹಿನ್ನೆಲೆಯಲ್ಲಿ ಶೀತ, ಕೆಮ್ಮು ಪರೀಕ್ಷೆ ಮಾಡಿಸಿಕೊಂಡು ಐಸೋಲೇಷನ್ ನಲ್ಲಿರುವಂತೆ ರಾಜ್ಯ ಆರೋಗ್ಯ ಇಲಾಖೆ ಸಲಹೆ ನೀಡಿದೆ. 

ಹೊಸ ತಳಿ ಪತ್ತೆಯಾಗಿರುವುದರಿಂದ ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ, ಗುಂಪು ಸೇರಿವಿಕೆಯಿಂದ ದೂರ ಇರುವುದು ಹಾಗೂ ಮೂರನೇ ಡೋಸ್ ಲಸಿಕೆ ಪಡೆಯುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಸಲಹೆ ನೀಡಿದೆ. 

ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಬಹಳಷ್ಟು ಎಚ್ಚರ ವಹಿಸಬೇಕಿದ್ದು, ಲಕ್ಷಣಗಳು ಕಂಡು ಬಂದ ಕೂಡಲೇ ಹತ್ತಿರದ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಿ ಫಲಿತಾಂಶ ದೊರೆಯುವವರೆಗೂ ಸ್ವಂಯ ಪ್ರತ್ಯೇಕವಾಸ ಇರಬೇಕು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ವೈದ್ಯಕೀಯ ಆರೈಕೆ ಪಡೆದುಕೊಳ್ಳಬೇಕೆಂದು ತಿಳಿಸಿದೆ. 

ಹವಾನಿಯಂತ್ರಣ ವ್ಯವಸ್ಥೆ ಇರುವ ಒಳಾಂಗಣ, ಅಗತ್ಯ ಗಾಳಿ-ಬೆಳಕಿಲ್ಲದಿರುವ ಸ್ಥಳಗಳು, ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳು ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಮಾಸ್ಕ್ ಧರಿಸಬೇಕು. ಹಬ್ಬಗಳನ್ನು ಸಾಧ್ಯವಾದಷ್ಟು ಹೊರಾಂಗಣಗಳಲ್ಲಿ ಆಚರಿಸಬೇಕು. ಜನ ದಟ್ಟಣೆಯ ಪ್ರದೇಶಗಳಿಂದ ದೂರವಿರಬೇಕು ಎಂದು ಮನವಿ ಮಾಡಿಕೊಂಡಿದೆ. 

ಮುನ್ನೆಚ್ಚರಿಕೆ ಲಸಿಕೆ ಡೋಸ್ ಪಡೆಯಲು ಬಾಕಿ ಇರುವವರು ಕೂಡಲೇ ಪಡೆದುಕೊಳ್ಳಬೇಕು. 60 ವರ್ಷ ಮೇಲ್ಪಟ್ಟವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಶೀಘ್ರವೇ ಲಸಿಕೆಯನ್ನು ಪಡೆಯಬೇಕು. ಜೀವ ನಿರೋಧಕ ಕಡಿಮೆ ಇರುವವರು, ಡಯಾಲಿಸಿಸಿ ಮಾಡಿಸಿಕೊಳ್ಳುವವರು ಮತ್ತು ಕ್ಯಾನ್ಸರ್ ನಿರೋಧಕ ಔಷಧಿಗಳನ್ನು ಸೇವಿಸುತ್ತಿರುವವರು ತಮಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಸಮಾಲೋಚನೆ ನಂತರ ಆದ್ಯತೆಯ ಮೇಲೆ ಕೋವಿಡ್-19 ಲಸಿಕೆಯನ್ನು ಪಡೆದುಕೊಳ್ಳಬೇಕೆಂದು ತಿಳಿಸಿದೆ. 

ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಮಡಚಿದ ಮೊಣಕೈ ಒಳಗೆ ಕೆಮ್ಮುವುದು ಹಾಗೂ ಸೀನುವುದು. ಕರವಸ್ತ್ರ/ಟಿಶ್ಯೂ ಪೇಪರ್'ನ ಬಳಕೆ, ಸಾರ್ವಜನಿಕ ಸ್ಥಳಗಳಲ್ಲಿ ಮೂಗನ್ನು ಶುಚಿಗೊಳಿಸದಿರುವುದು ಹಾಗೂ ಉಗುಳದಿರುವುದು. ಕೈಗಳನ್ನು ಸೋಪ್ ನಿಂದ ತೊಳೆಯುವುದು ಹಾಗೂ ಸೋಂಕಿನ ಲಕ್ಷಣಗಳನ್ನು ಹೊಂದಿದವರ ಸಂಪರ್ಕದಿಂದ ದೂರವಿರುವ ಕ್ರಮಗಳನ್ನು ಪಾಲಿಸಬೇಕೆಂದು ಇಲಾಖೆ ಮನವಿ ಮಾಡಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT